Featured

ರಾಜ್ಯದಲ್ಲಿ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ : ಜಮೀರ್ – Vishwanews24

ರಾಜ್ಯದಲ್ಲಿ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ : ಜಮೀರ್

ಬೆಳಗಾವಿ: ರಾಜ್ಯದಲ್ಲಿ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಯಾರು ತೀರ್ಮಾನ ಮಾಡಕ್ಕಾಗಲ್ಲ. ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲವಲ್ಲ. ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು.

ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಡಿಕೆಶಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ಕೊಟ್ಟ ಅವರು, ಇದನ್ನ ಚಾಲನೆ ಯಾರು ಕೊಟ್ಟಿದ್ದು? ಅವರು ಹೇಳಿದ್ಮೇಲೆ ತಾನೇ ಬಂದಿದ್ದು. ಅಧ್ಯಕ್ಷರು ನಮ್ಮ ಒಕ್ಕಲಿಗ ಸಮಾಜ ಕಾರ್ಯಕ್ರಮದಲ್ಲಿ ಅವರಾಗಿ ಅವರು ನನಗೆ ಮುಂದೆ ಅವಕಾಶ ಕೊಡಿ ಎಂದು ಚಾಲನೆ ಕೊಟ್ಟಿದ್ದಾರೆ. ಕೇಳಿದ್ದು ಅವರೇ ತಾನೇ? ಎಂದು ಡಿಕೆಶಿಗೆ ಪ್ರಶ್ನೆ ಮಾಡಿದರು.

ಎಲ್ಲರೂ ಕ್ಲೇಮ್ ಮಾಡೋದು ಸಹಜ. ಎಲ್ಲರಿಗೂ ಆಸೆ ಇರುತ್ತದೆ. ಬಹಳ ಜನರಿಗೆ ಆಸೆ ಇದೆ. ಆಸೆ ಇರೋದ್ರಲ್ಲಿ ತಪ್ಪೇನಿಲ್ಲ. ಮೊನ್ನೆ ನಾನು ಹೇಳಿದ್ದೀನಿ ಮುಸ್ಲಿಂರಿಗೂ ಅವಕಾಶ ಸಿಗಬೇಕು. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ನಾವು ಜನಸಂಖ್ಯೆಯನುಸಾರ ಶೇಕಡಾ.15ರಷ್ಟು ಇದ್ದೇವೆ ಎಂದು ತಿಳಿಸಿದರು.

ಒಂದೇ ಸಮಾಜ ವೋಟ್ ಕೊಟ್ಟರೇ ಸಿಎಂ ಆಗಲು ಸಾಧ್ಯವಾಗಲ್ಲ. ಎಲ್ಲ ಸಮಾಜದವರನ್ನು ನಾವು ಜೊತೆಗೆ ತಗೆದುಕೊಂಡು ಹೋಗಬೇಕು. ಎಲ್ಲ ಸಮಾಜ ಸೇರಿ ಆಶೀರ್ವಾದ ಮಾಡಿದ್ರೆ ಸರ್ಕಾರ ಬರಲು ಸಾಧ್ಯವಾಗಲಿದೆ. ಒಂದೇ ಒಂದು ಸಮಾಜ ಬೆಂಬಲ ಕೊಟ್ಟರೆ ಯಾರು ಸಿಎಂ ಆಗಲು ಸಾಧ್ಯವಾಗಲ್ಲ ಎಂದರು.

ವ್ಯಕ್ತಿ ಪೂಜೆ ಮಾಡಬಾರದು ಪಕ್ಷ ಪೂಜೆ ಮಾಡಬೇಕೆಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ, ಪಕ್ಷ ಪೂಜೆ ಮಾಡ್ತಿದ್ದೀವಿ. ಅದರ ಜೊತೆ ವ್ಯಕ್ತಿ ಪೂಜೆ ಮಾಡಬೇಕಾಗುತ್ತದೆ. ಡಿಕೆಶಿ ಭೇಟಿಯಾಗ್ತೀರಾ ಅಂತಾ ಮಾಧ್ಯಮಗಳ ಪ್ರಶ್ನೆಗೆ, ಖಂಡಿತ. ನಮ್ಮ ಅಧ್ಯಕ್ಷರು ಇದ್ದಾರೆ, ಅವರನ್ನು ಬಿಟ್ಟು ಕಟೀಲ್ ಅವರನ್ನ ಭೇಟಿಯಾಗಬೇಕಾಗುತ್ತೆ ಎಂದು ಟೀಕಿಸಿದರು.

ಬಿಜೆಪಿ ಅಧ್ಯಕ್ಷರಿಗೆ ಭೇಟಿ ಮಾಡಕ್ಕಾಗುತ್ತ? ನನ್ನ ಕಾರ್ಯಕ್ರಮ ಮುಗಿಸಿ ಡಿಕೆಶಿ ಅವರನ್ನು ಭೇಟಿ ಆಗುತ್ತೇನೆ. ಬಾಯಿಮುಚ್ಚು ಅಂತಾ ಪರ್ಟಿಕ್ಯುಲರ್ ಆಗಿ ನನಗೆ ಹೇಳಿದ್ದಾರಾ? ನಾನು ಅವರ ಹೇಳಿಕೆ ನೋಡಿದ್ದೇನೆ. ಎಲ್ಲ ಜನ ಸೇರಿ ಪಕ್ಷ ಅಧಿಕಾರಕ್ಕೆ ತರಬೇಕು ಅಂದಿದ್ದಾರೆ ಎಂದು ಹೇಳಿದರು.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago