ಮೂಡುಬಿದಿರೆ: ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಇರುವ ಜೈನ ಸಮುದಾಯದ ಏಳಿಗೆಗಾಗಿ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸರಕಾರವನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾಜಿ ಸಚಿವರು, ಜೈನ ಸಮುದಾಯದಲ್ಲಿ ಶ್ರೀಮಂತ ವರ್ಗದವರಿದ್ದರೂ ಬಡವರ ಸಂಖ್ಯೆಯೂ ಹೆಚ್ಚಿದೆ.
ಕೃಷ್ಣಾ ನದಿ ತೀರದಲ್ಲಿ ದೊಡ್ಡ ಸಂಖ್ಯೆಯ ಜೈನರು ಕಬ್ಬು ಬೆಳೆ, ಹೈನೋದ್ಯಮ ಅವಲಂಬಿಸಿದ್ದಾರೆ. ಈ ಬಾರಿಯ ನೆರೆಯಲ್ಲಿ ಬೆಳೆ ಹಾನಿಯಾಗಿದ್ದು, ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬೆಳಗಾವಿ, ಬೀದರ್, ಗುಲ್ಬರ್ಗ, ಹುಬ್ಬಳ್ಳಿ, ವಿಜಯಪುರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕೂಲಿ ಕೆಲಸ ಮಾಡುತ್ತಿದ್ದು, ಮೂಲ ಆದಾಯಕ್ಕಿಂತಲೂ ಕಡಿಮೆ ಆದಾಯ ಹೊಂದಿದವರಾಗಿದ್ದಾರೆ. ಹೀಗಾಗಿ ತಮ್ಮ ಬೇಡಿಕೆ ನ್ಯಾಯಯುತವಾಗಿದ್ದು, ರಾಷ್ಟ್ರೀಯ ಜೈನ್ ಮಿಲನ್ನ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಶೀಘ್ರವೇ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತು ಬೇಡಿಕೆ ಸಲ್ಲಿಸಲಾಗುವುದು ಎಂದರು.
ಸಮುದಾಯದ ಅಭಿವೃದ್ಧಿ ನಿಗಮಗಳಿಗೆ ಅನುದಾನದ ಕೊರತೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಯಾವುದೇ ನಿಗಮಗಳಿಗೆ ಅನುದಾನದ ಕೊರತೆಯಾಗಿಲ್ಲ. ಈ ಸರಕಾರವು ಅನುದಾನ ಒದಗಿಸುವ ಬದ್ಧತೆ ತೋರಬೇಕು ಎಂದರು. ಚೌಟರ ಅರಮನೆಯ ಕುಲದೀಪ ಎಂ., ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್, ಕೆಲ್ಲಪುತ್ತಿಗೆ ಅರಮನೆಯ ರಾಜವರ್ಮ ಬೈಲಂಗಡಿ, ಪೆರಿಂಜೆಗುತ್ತು ಜಯರಾಜ ಕಂಬ್ಳಿ, ಜೈನ್ ಮಿಲನ್ ಅಧ್ಯಕ್ಷೆ ಶ್ವೇತಾ ಜೈನ್ ಉಪಸ್ಥಿತರಿದ್ದರು
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…