ಮೂಡುಬಿದಿರೆ: ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಇರುವ ಜೈನ ಸಮುದಾಯದ ಏಳಿಗೆಗಾಗಿ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸರಕಾರವನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾಜಿ ಸಚಿವರು, ಜೈನ ಸಮುದಾಯದಲ್ಲಿ ಶ್ರೀಮಂತ ವರ್ಗದವರಿದ್ದರೂ ಬಡವರ ಸಂಖ್ಯೆಯೂ ಹೆಚ್ಚಿದೆ.
ಕೃಷ್ಣಾ ನದಿ ತೀರದಲ್ಲಿ ದೊಡ್ಡ ಸಂಖ್ಯೆಯ ಜೈನರು ಕಬ್ಬು ಬೆಳೆ, ಹೈನೋದ್ಯಮ ಅವಲಂಬಿಸಿದ್ದಾರೆ. ಈ ಬಾರಿಯ ನೆರೆಯಲ್ಲಿ ಬೆಳೆ ಹಾನಿಯಾಗಿದ್ದು, ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬೆಳಗಾವಿ, ಬೀದರ್, ಗುಲ್ಬರ್ಗ, ಹುಬ್ಬಳ್ಳಿ, ವಿಜಯಪುರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕೂಲಿ ಕೆಲಸ ಮಾಡುತ್ತಿದ್ದು, ಮೂಲ ಆದಾಯಕ್ಕಿಂತಲೂ ಕಡಿಮೆ ಆದಾಯ ಹೊಂದಿದವರಾಗಿದ್ದಾರೆ. ಹೀಗಾಗಿ ತಮ್ಮ ಬೇಡಿಕೆ ನ್ಯಾಯಯುತವಾಗಿದ್ದು, ರಾಷ್ಟ್ರೀಯ ಜೈನ್ ಮಿಲನ್ನ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಶೀಘ್ರವೇ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತು ಬೇಡಿಕೆ ಸಲ್ಲಿಸಲಾಗುವುದು ಎಂದರು.
ಸಮುದಾಯದ ಅಭಿವೃದ್ಧಿ ನಿಗಮಗಳಿಗೆ ಅನುದಾನದ ಕೊರತೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಯಾವುದೇ ನಿಗಮಗಳಿಗೆ ಅನುದಾನದ ಕೊರತೆಯಾಗಿಲ್ಲ. ಈ ಸರಕಾರವು ಅನುದಾನ ಒದಗಿಸುವ ಬದ್ಧತೆ ತೋರಬೇಕು ಎಂದರು. ಚೌಟರ ಅರಮನೆಯ ಕುಲದೀಪ ಎಂ., ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್, ಕೆಲ್ಲಪುತ್ತಿಗೆ ಅರಮನೆಯ ರಾಜವರ್ಮ ಬೈಲಂಗಡಿ, ಪೆರಿಂಜೆಗುತ್ತು ಜಯರಾಜ ಕಂಬ್ಳಿ, ಜೈನ್ ಮಿಲನ್ ಅಧ್ಯಕ್ಷೆ ಶ್ವೇತಾ ಜೈನ್ ಉಪಸ್ಥಿತರಿದ್ದರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…