Featured

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ನಿರ್ಬಂಧ – Vishwanews24

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ – ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ನಿರ್ಬಂಧ

ಕಾನೂನು ಉಲ್ಲಂಘಿಸಿದರೆ 10 ಲಕ್ಷ ದಂಡ, 7 ವರ್ಷ ಜೈಲು

ಬೆಂಗಳೂರು: ಕಲರ್ ಕಾಟನ್ ಕ್ಯಾಂಡಿಯನ್ನು ನಿಷೇಧ ಮಾಡಿ ಆಹಾರ ಮತ್ತು ಸುರಕ್ಷತಾ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಗೋಬಿ ಮಂಚೂರಿಯಲ್ಲಿ ಕೂಡ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ , ಇತ್ತೀಚೆಗೆ ಕ್ಯಾನ್ಸರ್ ಸೇರಿದಂತೆ ಆರೋಗ್ಯ ಹಾಳಾಗುತ್ತಿದೆ. ಬೀದಿ ಬದಿ, ಹೊಟೇಲ್ ಊಟದ ಮೇಲೆ ಜನ ಹೆಚ್ಚು ಅವಲಂಬನೆ ಆಗುತ್ತಿದ್ದಾರೆ. ಆಹಾರ ಸರಿಯಾದ ರೀತಿ ಸೇವನೆ ಆಗದಿದ್ದರೆ ಅನಾರೋಗ್ಯ ಹೆಚ್ಚಾಗುತ್ತಿದೆ. ಹೆಚ್ಚು ಕೊಬ್ಬಿನಾಂಶ, ಉಪ್ಪು, ಸಕ್ಕರೆ, ಹೆಚ್ಚಿರೋ ಆಹಾರದಿಂದ ದುಷ್ಪರಿಣಾಮ ಇದೆ ಎಂದರು.

ಎರಡು ಪದಾರ್ಥಗಳಾದ ಕಾಟನ್ ಕ್ಯಾಂಡಿ ಮತ್ತು ಗೋಬಿ ಸ್ಯಾಂಪಲ್ ಕಲೆಕ್ಟ್ ಮಾಡಲಾಯಿತು. ಬೀದಿ ಬದಿ, ಹೊಟೇಲ್ ಗಳಲ್ಲಿ ಗೋಬಿಯ 171 ಮಾದರಿ ಸಂಗ್ರಹ ಮಾಡಲಾಯಿತು. ಇದರಲ್ಲಿ 107 ಕೃತಕ ಬಣ್ಣ ಬಳಕೆ ಆಗಿದೆ. ರೋಡಮೈನ್ ಬಿ, ಟಾರ್ ಟ್ರಾಸೈನ್ ಸ್ಯಾಂಪಲ್ ನಲ್ಲಿ ಸಿಕ್ಕಿದೆ. ರೋಡಮೈನ್ ಕ್ಯಾನ್ಸರ್ ಗೆ ಕಾರಣವಾಗಿದೆ. ಇದನ್ನ ಬಳಕೆ ಮಾಡಲು ಪರ್ಮಿಷನ್ ಇಲ್ಲ. ಮಕ್ಕಳು ಕಾಟನ್ ಕ್ಯಾಂಡಿ ಹೆಚ್ಚಾಗಿ ಸೇವನೆ ಮಡ್ತಾ ಇದ್ದಾರೆ ಎಂದು ಹೇಳಿದರು.

ಟಾರ್ ಟ್ರಾಸೈನ್ ಬಳಕೆಗೆ ಅಪ್ರೂವಲ್ ಇದೆ. ಆದರೆ ಗೋಬಿಯಂತಹ ಪ್ರಿಪೇರ್ ಫುಡ್ ನಲ್ಲಿ ಇದು ಬಳಕೆ ಇಲ್ಲ. 107 ಸ್ಯಾಂಪಲ್ ನಲ್ಲಿ 12 ಟಾರ್ ಟ್ರಾಸೈನ್ ಸಿಕ್ಕಿದೆ. ಸನ್ ಸೆಟ್ 33 ಸಿಕ್ಕಿದೆ ಇದ್ಯಾವುದನ್ನು ಫುಡ್ ಗಳಲ್ಲಿ ಬಳಕೆ ಮಾಡುವಂತಿಲ್ಲ. ಹೀಗಾಗಿ ಕಾನೂನು ಪ್ರಕಾರ ಉಲ್ಲಂಘನೆ ಮಾಡಿದವರಿಗೆ 10 ಲಕ್ಷ ದಂಡ, 7 ವರ್ಷ ಶಿಕ್ಷೆಗೆ ಅವಕಾಶ ಇದೆ. ಪ್ಲೇನ್ ಕಾಟನ್ ಕ್ಯಾಂಡಿ ತಯಾರಿ ಮಾಡಬಹುದು. ಆದರೆ ಕಲರ್ ಕಾಟನ್ ಕ್ಯಾಂಡಿ ಮಾತ್ರ ಮಾರಾಟ ಮಾಡುವಂತಿಲ್ಲ ಎಂದು ಗುಂಡೂರಾವ್ ತಿಳಿಸಿದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago