ರಾಜ್ಯದಲ್ಲಿ ಕಾಲೇಜು ಆರಂಭದ ಬಗ್ಗೆ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ -Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಕಾಲೇಜು ಆರಂಭದ ಬಗ್ಗೆ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ -Vishwanews24

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಪಿಯುಸಿ ಕಾಲೇಜುಗಳ ಆರಂಭದ ಕುರಿತು ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಯುಸಿ ಕಾಲೇಜು ಪುನಾರಂಭದ ಕುರಿತಂತೆ ಸೋಮವಾರ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಎಂದರು.

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇಗುಲ: ಧ್ವಜಾರೋಹಣ:- vishwanews24

ಇನ್ನು ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

Leave a Reply