ಬೆಂಗಳೂರು : “ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
“ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ನೀಡಿದರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ” ಎಂದು ತಿಳಿಸಿದ್ದಾರೆ.
“ಸೋಮವಾರ ಸಿಎಂ ಸಭೆ ಮಾಡಿದ್ದಾರೆ. ಸಿಎಂ ನಿರ್ದೇಶನ ಪಾಲಿಸುತ್ತೇವೆ. ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಹಾಕೋದು ಒಳ್ಳೆಯದು. ಆರೋಗ್ಯದಲ್ಲಿ ವ್ಯತ್ಯಾಸ ಇರೋ ಮಕ್ಕಳು ಶಾಲೆಗೆ ಬರೋದು ಬೇಡ ಎಂದು ಸೋಮವಾರ ನಡೆದ ಸಿಎಂ ಸಭೆಯಲ್ಲಿ ನಿರ್ಧಾರವಾಗಿದೆ. ಶಿಕ್ಷಕರು, ಮಕ್ಕಳು, ಪೋಷಕರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು” ಎಂದಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…