Featured

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ ; ಎಚ್ಚರಿಕೆಯಿಂದ ಇರಲು ಸಿಎಂ ಸೂಚನೆ – vishwanews24

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ ;  ಎಚ್ಚರಿಕೆಯಿಂದ ಇರಲು ಸಿಎಂ ಸೂಚನೆ

ಬೆಂಗಳೂರು ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊರೊನಾ ಸಂಬಂಧ ಸೋಮವಾರ ಸಭೆ ನಡೆಸಿದ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಅವರು, ಸೋಮವಾರ ಕೋವಿಡ್ ಸಂಬಂಧ ಸಭೆ ಮಾಡಿದ್ದೇನೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆ ಸಭೆ ಮಾಡಿದ್ದೇನೆ. ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಎಲ್ಲದಕ್ಕೂ ತಯಾರಿರುವಂತೆ ಸೂಚನೆ ಕೊಟ್ಟಿದ್ದೇನೆ. ವೆಂಟಿಲೇಟರ್, ಆಕ್ಸಿಜನ್, ಪಿಪಿಇ ಕಿಟ್, ಬೆಡ್ ಯಾವುದರ ಕೊರತೆ ಇರಬಾರದು ಎಂದು ಸೂಚಿಸಿದ್ದಾನೆ ಎಂದು ತಿಳಿಸಿದರು.

ವಾರ್ಡ್ಗಳನ್ನು ಸಿದ್ಧ ಮಾಡಲು ಸೂಚನೆ ನೀಡಿದ್ದೇನೆ. ಇದು ಅಷ್ಟು ಅಪಾಯಕಾರಿ ತಳಿ ಅಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇರಬೇಕು. ಮಕ್ಕಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರನ್ನ ಶಾಲೆಗೆ ಕಳಿಸೋದು ಬೇಡ ಅಂತ ಹೇಳಿದ್ದೇವೆ. ವಯಸ್ಸಾದವರು, ವಿವಿಧ ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.

ಲಸಿಕೆ ಸಿದ್ಧ ಮಾಡಿಕೊಳ್ಳಿ, ವ್ಯಾಕ್ಸಿನ್ ಖರೀದಿ ಮಾಡಿ ಇಟ್ಕೊಳ್ಳಿ ಅಂತ ಸೂಚನೆ ಕೊಟ್ಟಿದ್ದೇನೆ. ವಯಸ್ಸು ಆಗಿರೋದು, ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಹಾಕಬೇಕು. ಏರ್ಪೋರ್ಟ್‌ನಲ್ಲಿ ಟೆಸ್ಟ್ ಮಾಡೋ ಬಗ್ಗೆ ನಿರ್ಧಾರ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಆದರೂ ಎಚ್ಚರಿಕೆಯಿಂದ ಇರಲು ಹೇಳಿದ್ದೇನೆ ಎಂದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

18 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

40 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

46 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago