Featured

ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಅಮಲು ಇಳಿಸಿ, ಸಾವಿನ ಸಂಖ್ಯೆ ಇಳಿಸಿ ; ಮೊದಲ ಅಧಿವೇಶನದಲ್ಲೇ ಸರ್ಕಾರದ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ – vishwanews24

ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಅಮಲು ಇಳಿಸಿ, ಸಾವಿನ ಸಂಖ್ಯೆ ಇಳಿಸಿ ; ಮೊದಲ ಅಧಿವೇಶನದಲ್ಲೇ ರಾಜ್ಯ ಸರ್ಕಾರದ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆ ಸಕ್ರಿಯವಾಗಿದ್ದರೂ ಕೂಡ ಡ್ರಗ್ಸ್ ವ್ಯಸನಿಗಳ ಸಂಖ್ಯೆ ಹಾಗೂ ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ, ಇದನ್ನು ಗೃಹ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಅಮಲು ಮುಕ್ತ ಕರ್ನಾಟಕವನ್ನಾಗಿ ಮಾಡಬೇಕು ಎಂದು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರನ್ನು ಶಾಸಕ ಡಾ.ಧನಂಜಯ ಸರ್ಜಿ ಅವರು ಆಗ್ರಹಿಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ 153ನೇ ವಿಧಾನ ಮಂಡಲ ಅಧಿವೇಶನದಲ್ಲಿ ಗುರುವಾರ ಅವರು ಸಧನಲ್ಲಿ ಮಾತನಾಡಿ, ಇಡೀ ಭಾರತದಲ್ಲೇ ನಮ್ಮ ರಾಜ್ಯವೂ ಮಾದಕ ವಸ್ತು ವ್ಯಸನ ಮತ್ತು ಸಾವಿನ ಸಂಖ್ಯೆಯಲ್ಲಿ 2 ನೇ ಸ್ಥಾನದಲ್ಲಿದ್ದು, ಗಾಂಜಾ, ಡ್ರಗ್ಸ್ ಹಾಗೂ ಅಪೀಮುಗಳ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು,

ದುಶ್ಚಟಗಳಲ್ಲಿ ಬೀಡಿ, ಸಿಗರೇಟು, ಮನುಷ್ಯನನ್ನು ಬಲಿಪಡೆದರೆ, ಮದ್ಯ ವ್ಯಸನ ಕುಟುಂಬವನ್ನು ಬಲಿ ಪಡೆಯುತ್ತದೆ, ಡ್ರಗ್ಸ್ ಸಮಾಜವನ್ನು ಬಲಿ ತೆಗೆದುಕೊಳ್ಳುತ್ತದೆ, ಭಾರತದಲ್ಲಿ 16 ಕೋಟಿ ಮದ್ಯವ್ಯಸನಿಗಳಿದ್ದು, 5.7 ಕೋಟಿ ಪ್ರಾಬ್ಲಮ್ ಯೂಸರ್ಸ್ ಇದ್ದಾರೆ, 2.9 ಕೋಟಿ ಜನ ಡಿಪೆಂಡೆಂಟ್ ಮದ್ಯ ವ್ಯಸನಿಗಳಾಗಿದ್ದು, ಭಾರತದಲ್ಲಿ ಕ್ಯಾನಿಬಿಸ್ ನ್ನು 3.1 ಕೋಟಿ ಜನ ಸೇವಿಸಿದರೆ, 2.3 ಕೋಟಿ ಜನ ಓಪಿಯಾಡ್ ವ್ಯಸನಿಗಳಿದ್ದಾರೆ, ಈ ಪೈಕಿ 25 ರಿಂದ 28 ಲಕ್ಷ ಡಿಪೆಂಡೆಂಟ್ ವ್ಯಸನಿಗಳಿದ್ದಾರೆ, ದೇಶದಲ್ಲಿ 3 ಕೋಟಿ ಗೂ ಹೆಚ್ಚುಜನ ಮಾದಕ ವಸ್ತು ವ್ಯಸನಿಗಳಿದ್ದು, ಭಾರತದಲ್ಲಿ ಡ್ರಗ್ಸ್ ಓವರ್ ಡೋಸ್ ನಿಂದ 8 ಸಾವಿರ ಜನ ಬಲಿಯಾಗಿದ್ದಾರೆ. ಈ ಪೈಕಿ 2017 ರಲ್ಲಿ ಕರ್ನಾಟಕದಲ್ಲಿ 81, 2018 ರಲ್ಲಿ 91 ಜನ, 2019 ರಲ್ಲಿ 67 ಜನ, ಇವುಗಳ ಪ್ರಕಾರ ಡ್ರಗ್ಸ್ ವ್ಯಸನಕ್ಕೆ ಬಲಿಯಾಗಿರುವ ಸಂಖ್ಯೆಯಲ್ಲಿ ರಾಜ್ಯವು ಭಾರತದಲ್ಲಿ 2ನೇ ಸ್ಥಾನದಲ್ಲಿರುವುದು ನಿಜಕ್ಕೂ ಆತಂಕಕಾರಿಯಾಗಿದೆ, ಈ ನಿಟ್ಟಿನಲ್ಲಿ ನಿಯಂತ್ರಣಕ್ಕೆ ಕ್ರಮ ಯಾವುದು? ಹಾಗೂ 2020 ರಿಂದ 2024 ರವರೆಗೆ ಮಾಹಿತಿಯನ್ನು ನೀಡಬೇಕೆಂದು ಗೃಹ ಸಚಿವರನ್ನು ವಿನಂತಿಸಿಕೊಂಡರು.

ಗೃಹ ಸಚಿವರು, ಪೋಲೀಸ್ ಇಲಾಖೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಉತ್ತರ ನೀಡಿದ್ದಾರೆ, ಆದರೆ, ಕಳೆದ ತಿಂಗಳ 27 ರಂದು ಡ್ರಗ್ಸ್ ಸೇವಿಸಿ ಹಣಕ್ಕಾಗಿ ಇಬ್ಬರ ಕೊಲೆ ಹಾಗೂ ಮೇ 22 ರಂದು ರೇವ್ ಪಾರ್ಟಿಯಲ್ಲಿ 50 ಲಕ್ಷ ರೂ ಖರ್ಚು ಮಾಡಿ 500 ರೂ. ನೋಟಿನಲ್ಲಿ ಕೆನಬಿಸ್ ನ್ನು ಇಂಜೆಕ್ಟ್ ಮಾಡಿ ಡ್ರಗ್ಸ್ ಸೇವನೆ ಮಾಡಿದ ಕುರಿತು ಪತ್ರಿಕಾ ವರದಿಗಳ ದಾಖಲೆಗಳನ್ನು ಪ್ರದರ್ಶಿಸಿ ಪೊಲೀಸ್ ಇಲಾಖೆ ವೈಫಲ್ಯವನ್ನು ಪ್ರಶ್ನಿಸಿದರು.

ಡಾರ್ಕ್ ವೆಬ್ ಸ್ದೈಟ್ ಮೂಲಕ ಸಂಪರ್ಕ ಸಾಧಿಸಿ ಕೊರಿಯರ್ ಮೂಲಕ ಡ್ರಗ್ಸ್ ಪಡೆದುಕೊಳ್ಳುತ್ತಿರುವುದು ಇದು ನಿಜಕ್ಕೂ ಆಶ್ಚರ್ಯ ಮತ್ತು ಆತಂಕಕಾರಿ ಬೆಳವಣಿಗೆ, ಈ ಡಾರ್ಕ್ ವೆಬ್ ಸೈಟ್ ನಲ್ಲಿ ಯಾರು ಆರ್ಡರ್ ಮಡಿದ್ದಾರೆ? ಎಲ್ಲಿಂದ ಬಂತು ? ಎಂಬ ಮಾಹಿತಿ ಎಲ್ಲಿಯೂ ದೊರಕುವುದಿಲ್ಲ, ಕೊರಿಯರ್ ಮೂಲಕ ಮನೆಗೆ ಬಾಗಿಲಿಗೆ ಬರುತ್ತಿದೆ, ಡೆಲಿವರಿ ಸಮಯದಲ್ಲಿ ಸಿಕ್ಕಿ ಬೀಳುತ್ತಾರೆ, ಈ ಬಗ್ಗೆಯೂ ಸಚಿವರು ಕ್ರಮ ಕೈಗೊಳ್ಳಬೇಕು ಹಾಗೂ ಪ್ಲಾಸ್ಟಿಕ್ ಬಳಕೆ ಮಾಡಬೇಡಿ ಎನ್ನುತ್ತಾ ಉತ್ಪಾದನೆ ನಿಲ್ಲುತ್ತಿಲ್ಲ, ಉತ್ಪಾದನೆ ನಿಲ್ಲಿಸದೇ ಅದನ್ನು ತಡೆಯಲು ಸಾಧ್ಯವಿಲ್ಲ, ಹಾಗೆಯೇ ಡ್ರಗ್ಸ್ ನ್ನು ಉತ್ಪಾದನೆಯಲ್ಲೇ ಚಿವುಟಿ ಹಾಕಬೇಕಿದೆ, ರಾಜ್ಯದ ಪಿಎಚ್ ಸಿ ಮತ್ತು ಸಿಎಚ್ ಸಿ ಸೆಂಟರ್ ಗಳಲ್ಲಿ ಗಾಂಜಾ ಟೆಸ್ಟಿಂಗ್ ಕಿಟ್ ಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಹಾಗೆಯೇ ಮಹಿಳೆಯರ ಮಾದಕ ವಸ್ತು ಪುನರ್ವಸತಿ ಕೇಂದ್ರಗಳಿಲ್ಲ, ಆ ಕೇಂದ್ರಗಳು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂಬುದುರ ಬಗ್ಗೆ ಅನುಮಾನ ಬರುತ್ತಿದೆ, ಅಲ್ಲದೇ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ತೂರಾಡುವಂತ ಘಟನೆಗಳು, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ, ಹಾಗೂಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನದಡಿ ರಾಜ್ಯದಲ್ಲಿ ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳನ್ನು ಮಾಡಬೇಕು, ಇದರಡಿಯಲ್ಲಿ ಸುಮಾರು 8 ಸಾವಿರ ಮಾಸ್ಟರ್ ಸ್ವಯಂ ಸೇವಕರು ಕಾರ್ಯ ನಿರ್ವಹಿಸುತ್ತಿದ್ದಾರೆ, ದೇಶದ 272 ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯುತ್ತಿದೆ, ವಿಶ್ವ ವಿದ್ಯಾಲಯಗಳು, ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ, ನಮ್ಮ ರಾಜ್ಯದಲ್ಲಿಯೂ ಇದು ಶುರುವಾಗಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಮಾದಕ ವ್ಯಸನ ಇಡೀ ದೇಶದಲ್ಲಿ ಇದೆ, ನಮ್ಮ ರಾಜ್ಯದಲ್ಲೂ ಇದೆ, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಮೇಲೆ ಮಾದಕ ವಸ್ತು ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಾಗುತ್ತಿದೆ, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕರ್ನಾಟಕವನ್ನು ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಘೋಷಣೆ ಮಾಡಿದ್ದರು. ಈಗಾಗಲೇ 268 ಮಾದಕ ವಸ್ತು ಮುಕ್ತ ಸೆಂಟರ್ ತೆರೆಲಾಗಿದೆ, ಅದರಲ್ಲೇ ಮಹಿಳೆಯರಿಗೂ ವ್ಯವಸ್ಥೆ ಮಾಡಲಾಗಿದೆ, ಜೊತೆಗೆ ಎನ್ ಜಿಒ ಗಳು ಕೈ ಜೋಡಿಸಿವೆ ಎಂದರು , ಅಲ್ಲದೇ ಅಂಚೆ ಅಥವಾ ಕೊರಿಯರ್ ಮೂಲಕ ರವಾನೆ ಆಗುವಂತ ಡ್ರಗ್ಸ್ ಬಗ್ಗೆ ಗೃಹ ಇಲಾಕೆ ಕಣ್ಣಿಟ್ಟಿದೆ, ನಿರ್ಲಕ್ಯ ಮಾಡಿಲ್ಲ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಪ್ರತಿ ವರ್ಷ 10 ಟನ್ ಗಾಂಜಾ ಸುಟ್ಟು ಹಾಕಲಾಗುತ್ತಿದೆ, 250 ರಿಂದ 400 ಸಿಂಥೆಟಿಕ್ ಎಂಡಿಎಂಎ ಡ್ರಗಸ್ ಸುಡಲಾಗಿದೆ, 150 ಕೋಟಿ ರೂ .ಮೌಲ್ಯದ ಮಾದಕ ವಸ್ತು ಸುಟ್ಟು ಹಾಕಲಾಗಿದೆ ಎಂದು ಉತ್ತರಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago