ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ : ನಿಖಿಲ್ ಕುಮಾರಸ್ವಾಮಿ – Vishwanews24
ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ : ನಿಖಿಲ್ ಕುಮಾರಸ್ವಾಮಿ
ಕೋಲಾರ: ಬಿಜೆಪಿ ಸರ್ಕಾರದ ಕರ್ಮಕಾಂಡಗಳು ನಿತ್ಯ ಬಯಲಾಗುತ್ತಿವೆ. ಈ ಸರ್ಕಾರ ಹಗರಣದಲ್ಲಿ ಮುಳುಗಿದೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ನಗರ ಹೊರವಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನರು ಈಗಾಗಲೇ ಅಧಿಕಾರ ಕೊಟ್ಟು ನೋಡಿದ್ದಾರೆ. ಆದರೆ, ಜನಸಾಮಾನ್ಯರಿಗೆ ಒಳ್ಳೆಯದನ್ನು ಮಾಡಲು ಅಧಿಕಾರವನ್ನು ಸರಿಯಾಗಿ ಬಳಸಿಕೊಳ್ಳದೆ ವಿಫಲವಾಗಿವೆ’ ಎಂದರು.
‘ಬಜೆಟ್ ಸರಿಯಾಗಿ ಉಪಯೋಗ ಆಗಬೇಕೆಂದು ಕುಮಾರಸ್ವಾಮಿ ಪಂಚರತ್ನ ಯೋಜನೆ ರೂಪಿಸಿದ್ದಾರೆ. 77 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ತಿಳಿಸಿದರು.
BSF ನಲ್ಲಿ ಮಾಜಿ ಅಗ್ನಿವೀರ್ಗಳಿಗೆ 10% ಮೀಸಲಾತಿ: ಕೇಂದ್ರ ಸರ್ಕಾರ ಘೋಷಣೆ – Vishwanews24
‘ಅಕ್ಕಪಕ್ಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತ ನಡೆಸುತ್ತಿವೆ. ಆ ರಾಜ್ಯದ ಮುಖ್ಯಮಂತ್ರಿಗಳು ಎಚ್.ಡಿ.ದೇವೇಗೌಡರ ಮೇಲೆ ವಿಶೇಷ ಗೌರವ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಆಶಯ ಹೊಂದಿವೆ’ ಎಂದರು.
‘ದೇವೇಗೌಡರ ಹೆಸರು ಶಾಶ್ವತ. ಅವರ ಹೆಸರೇ ನಮಗೆ ಸ್ಫೂರ್ತಿ. ಈ ತಿಂಗಳ 26ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ವರ್ಚುವಲ್ ವೇದಿಕೆಗಳಲ್ಲಿಯೂ ಅವರನ್ನು ಬಳಸಿಕೊಳ್ಳುತ್ತೇವೆ. ಅವರ ಮೇಲೆ ಕನ್ನಡಿಗರು ಬಹಳ ಗೌರವ ಇಟ್ಟುಕೊಂಡಿದ್ದಾರೆ’ ಎಂದು ನುಡಿದರು.
‘ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭ್ಯರ್ಥಿಗಳು ಪ್ರಬಲವಾಗಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಹಿಡಿತ ಸಾಧಿಸಲಿದ್ದೇವೆ. ಮಾರ್ಚ್ 20ರಂದು ಕೋಲಾರ ಜಿಲ್ಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ನಾನು, ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದೇವೆ’ ಎಂದರು.
‘ಪದೇಪದೇ ಕೋಲಾರಕ್ಕೆ ಭೇಟಿ ನೀಡುವುದು ಎನ್ನುವುದಕ್ಕಿಂತ ಈ ಭಾಗದಲ್ಲಿ ಈ ಬಾರಿ ಜೆಡಿಎಸ್ಗೆ ಗೆಲುವಿನ ಅವಕಾಶಗಳು ಹೆಚ್ಚಿವೆ. 123 ಸ್ಥಾನಗಳ ಮಿಷನ್ನೊಂದಿಗೆ ಪಂಚರತ್ನ ಯಾತ್ರೆ ಕೈಗೊಂಡಿದ್ದೇವೆ’ ಎಂದು ಹೇಳಿದರು.
BSF ನಲ್ಲಿ ಮಾಜಿ ಅಗ್ನಿವೀರ್ಗಳಿಗೆ 10% ಮೀಸಲಾತಿ: ಕೇಂದ್ರ ಸರ್ಕಾರ ಘೋಷಣೆ – Vishwanews24
