Featured

ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್‌ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ : ನಿಖಿಲ್‌ ಕುಮಾರಸ್ವಾಮಿ – Vishwanews24

ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್‌ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ : ನಿಖಿಲ್‌ ಕುಮಾರಸ್ವಾಮಿ

ಕೋಲಾರ: ಬಿಜೆಪಿ ಸರ್ಕಾರದ ಕರ್ಮಕಾಂಡಗಳು ನಿತ್ಯ ಬಯಲಾಗುತ್ತಿವೆ. ಈ ಸರ್ಕಾರ ಹಗರಣದಲ್ಲಿ ಮುಳುಗಿದೆ’ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದರು.

ನಗರ ಹೊರವಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್‌ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನರು ಈಗಾಗಲೇ ಅಧಿಕಾರ ಕೊಟ್ಟು ನೋಡಿದ್ದಾರೆ. ಆದರೆ, ಜನಸಾಮಾನ್ಯರಿಗೆ ಒಳ್ಳೆಯದನ್ನು ಮಾಡಲು ಅಧಿಕಾರವನ್ನು ಸರಿಯಾಗಿ ಬಳಸಿಕೊಳ್ಳದೆ ವಿಫಲವಾಗಿವೆ’ ಎಂದರು.

‘ಬಜೆಟ್‌ ಸರಿಯಾಗಿ ಉಪಯೋಗ ಆಗಬೇಕೆಂದು ಕುಮಾರಸ್ವಾಮಿ ಪಂಚರತ್ನ ಯೋಜನೆ ರೂಪಿಸಿದ್ದಾರೆ. 77 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ತಿಳಿಸಿದರು.

‘ಅಕ್ಕಪಕ್ಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತ ನಡೆಸುತ್ತಿವೆ. ಆ ರಾಜ್ಯದ ಮುಖ್ಯಮಂತ್ರಿಗಳು ಎಚ್‌.ಡಿ.ದೇವೇಗೌಡರ ಮೇಲೆ ವಿಶೇಷ ಗೌರವ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲೂ ಪ್ರಾದೇಶಿಕ ‍ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಆಶಯ ಹೊಂದಿವೆ’ ಎಂದರು.

‘ದೇವೇಗೌಡರ ಹೆಸರು ಶಾಶ್ವತ. ಅವರ ಹೆಸರೇ ನಮಗೆ ಸ್ಫೂರ್ತಿ. ಈ ತಿಂಗಳ 26ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ವರ್ಚುವಲ್‌ ವೇದಿಕೆಗಳಲ್ಲಿಯೂ ಅವರನ್ನು ಬಳಸಿಕೊಳ್ಳುತ್ತೇವೆ. ಅವರ ಮೇಲೆ ಕನ್ನಡಿಗರು ಬಹಳ ಗೌರವ ಇಟ್ಟುಕೊಂಡಿದ್ದಾರೆ’ ಎಂದು ನುಡಿದರು.

‘ಕೋಲಾರದಲ್ಲಿ ಜೆಡಿಎಸ್‌ ಕಾರ್ಯಕರ್ತರು, ಅಭ್ಯರ್ಥಿಗಳು ಪ್ರಬಲವಾಗಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಹಿಡಿತ ಸಾಧಿಸಲಿದ್ದೇವೆ. ಮಾರ್ಚ್‌ 20ರಂದು ಕೋಲಾರ ಜಿಲ್ಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ನಾನು, ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದೇವೆ’ ಎಂದರು.

‘ಪದೇಪದೇ ಕೋಲಾರಕ್ಕೆ ಭೇಟಿ ನೀಡುವುದು ಎನ್ನುವುದಕ್ಕಿಂತ ಈ ಭಾಗದಲ್ಲಿ ಈ ಬಾರಿ ಜೆಡಿಎಸ್‌ಗೆ ಗೆಲುವಿನ ಅವಕಾಶಗಳು ಹೆಚ್ಚಿವೆ. 123 ಸ್ಥಾನಗಳ ಮಿಷನ್‌ನೊಂದಿಗೆ ಪಂಚರತ್ನ ಯಾತ್ರೆ ಕೈಗೊಂಡಿದ್ದೇವೆ’ ಎಂದು ಹೇಳಿದರು.

 

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

7 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

9 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago