Featured

ರಾಜ್ಯದಲ್ಲಿ ಡ್ರಗ್ಸ್‌ ವಿರೋಧಿ ನೀತಿ ಶೀಘ್ರ ಜಾರಿಗೆ ತರಲಾಗುವುದು : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ರಾಜ್ಯದಲ್ಲಿ ಡ್ರಗ್ಸ್‌ ವಿರೋಧಿ ನೀತಿ ಶೀಘ್ರ ಜಾರಿಗೆ ತರಲಾಗುವುದು : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು : ರಾಜ್ಯದಲ್ಲಿ ಮಾದಕ ಪದಾರ್ಥಗಳ ದಂಧೆಗೆ ಕಡಿವಾಣ ಹಾಕಲು ಮತ್ತು ಈ ಪಿಡುಗಿನಿಂದ ಸಮಾಜವನ್ನು ಮುಕ್ತಗೊಳಿಸಲು ಸಮಗ್ರವಾದ “ಡ್ರಗ್ಸ್‌ ವಿರೋಧಿ ನೀತಿ’ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನೀತಿ ಕರಡು ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಸದನದಲ್ಲಿ ಮಂಡಿಸಲಾಗುವುದು. ಕೇಂದ್ರ ಸರಕಾರದ “ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ’ (ಎನ್‌ಡಿಪಿಎಸ್‌)ಯ ನಿಯಮಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರಕ್ಕೆ ಅಧಿಕಾರವಿದ್ದು, ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ : ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿ ವೇಳೆ ಬಿಜೆಪಿಯ ಮಹಾಂತೇಶ್‌ ಕವಟಗಿಮಠ ಪ್ರಶ್ನೆಗೆ ಬೊಮ್ಮಾಯಿ ಅವರು ಉತ್ತರಿಸಿದರು.

ರಾಜ್ಯದಲ್ಲಿ 2018ರಿಂದ 2021ರ ಮಾ. 10ರ ತನಕ 7,943 ಮಾದಕ ವಸ್ತು ಪ್ರಕರಣಗಳು ದಾಖಲಾಗಿದ್ದು, 10,566 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪಿಡುಗನ್ನು ಸಮಾಜದಿಂದ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರು ನಗರ ಸಹಿತ ಎಲ್ಲ ಜಿಲ್ಲೆಗಳಲ್ಲಿ ನಾರ್ಕೋಟಿಕ್‌ ಸೆಲ್‌ಗ‌ಳನ್ನು ಸ್ಥಾಪಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿಗಳಲ್ಲಿ ತೀವ್ರ ನಿಗಾ ಇರಿಸಲಾಗಿದೆ. ಈ ಪಿಡುಗು ನಿವಾರಣೆಗೆ ಗೃಹ ಇಲಾಖೆಯ ಜತೆಗೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಕೈಜೋಡಿಸಬೇಕು. ಈ ಕುರಿತು ಹಲವು ಸಭೆಗಳನ್ನು ನಡೆಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಕರಣಗಳನ್ನು ಬೆಳಕಿಗೆ ತರಲು ಮಾಧ್ಯಮಗಳ ಪಾತ್ರವೂ ಮುಖ್ಯವಾಗಿದೆ. ಮಾಧ್ಯಮದವರ ಜತೆ ಸೇರಿ ಗೃಹ ಇಲಾಖೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವರು ವಿವರಿಸಿದರು.

ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ಹುಕ್ಕಾ ಪಾರ್ಲರ್‌ ನಿಷೇಧ
ಹುಕ್ಕಾ ಪಾರ್ಲರ್‌ ನಡೆಸಲು ಬಿಬಿಎಂಪಿ ಲೈಸೆನ್ಸ್‌ ಕೊಡುತ್ತದೆ. ಅಲ್ಲಿ ಮಾದಕ ಪದಾರ್ಥಗಳ ಬಳಕೆಯಾಗು ವುದು ತಿಳಿದುಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಹುಕ್ಕಾ ಪಾರ್ಲರ್‌ಗಳ ನಿಷೇಧಕ್ಕೆ ವಿರೋಧವೂ ಇದೆ. ಆದರೆ ಇದನ್ನು ಲಕ್ಷಿಸದೆ ಹುಕ್ಕಾ ಪಾರ್ಲರ್‌ ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ : ಕುಂದಾಪುರ : ಪ್ರಧಾನಿ “ಪರೀಕ್ಷಾ ಪೇ ಚರ್ಚಾ’, ಚಾರಮಕ್ಕಿ ಶಾಲೆಯ ಅನುಷಾ ಆಯ್ಕೆ -Vishwanews24

 

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

1 hour ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

1 hour ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

1 hour ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

1 hour ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago