ಬೆಂಗಳೂರು : ರಾಜ್ಯದಲ್ಲಿ ಮಾದಕ ಪದಾರ್ಥಗಳ ದಂಧೆಗೆ ಕಡಿವಾಣ ಹಾಕಲು ಮತ್ತು ಈ ಪಿಡುಗಿನಿಂದ ಸಮಾಜವನ್ನು ಮುಕ್ತಗೊಳಿಸಲು ಸಮಗ್ರವಾದ “ಡ್ರಗ್ಸ್ ವಿರೋಧಿ ನೀತಿ’ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನೀತಿ ಕರಡು ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಸದನದಲ್ಲಿ ಮಂಡಿಸಲಾಗುವುದು. ಕೇಂದ್ರ ಸರಕಾರದ “ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ’ (ಎನ್ಡಿಪಿಎಸ್)ಯ ನಿಯಮಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರಕ್ಕೆ ಅಧಿಕಾರವಿದ್ದು, ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ : ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿ ವೇಳೆ ಬಿಜೆಪಿಯ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಬೊಮ್ಮಾಯಿ ಅವರು ಉತ್ತರಿಸಿದರು.
ರಾಜ್ಯದಲ್ಲಿ 2018ರಿಂದ 2021ರ ಮಾ. 10ರ ತನಕ 7,943 ಮಾದಕ ವಸ್ತು ಪ್ರಕರಣಗಳು ದಾಖಲಾಗಿದ್ದು, 10,566 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪಿಡುಗನ್ನು ಸಮಾಜದಿಂದ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರು ನಗರ ಸಹಿತ ಎಲ್ಲ ಜಿಲ್ಲೆಗಳಲ್ಲಿ ನಾರ್ಕೋಟಿಕ್ ಸೆಲ್ಗಳನ್ನು ಸ್ಥಾಪಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿಗಳಲ್ಲಿ ತೀವ್ರ ನಿಗಾ ಇರಿಸಲಾಗಿದೆ. ಈ ಪಿಡುಗು ನಿವಾರಣೆಗೆ ಗೃಹ ಇಲಾಖೆಯ ಜತೆಗೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಕೈಜೋಡಿಸಬೇಕು. ಈ ಕುರಿತು ಹಲವು ಸಭೆಗಳನ್ನು ನಡೆಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಕರಣಗಳನ್ನು ಬೆಳಕಿಗೆ ತರಲು ಮಾಧ್ಯಮಗಳ ಪಾತ್ರವೂ ಮುಖ್ಯವಾಗಿದೆ. ಮಾಧ್ಯಮದವರ ಜತೆ ಸೇರಿ ಗೃಹ ಇಲಾಖೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವರು ವಿವರಿಸಿದರು.
ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24
ಹುಕ್ಕಾ ಪಾರ್ಲರ್ ನಿಷೇಧ
ಹುಕ್ಕಾ ಪಾರ್ಲರ್ ನಡೆಸಲು ಬಿಬಿಎಂಪಿ ಲೈಸೆನ್ಸ್ ಕೊಡುತ್ತದೆ. ಅಲ್ಲಿ ಮಾದಕ ಪದಾರ್ಥಗಳ ಬಳಕೆಯಾಗು ವುದು ತಿಳಿದುಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಹುಕ್ಕಾ ಪಾರ್ಲರ್ಗಳ ನಿಷೇಧಕ್ಕೆ ವಿರೋಧವೂ ಇದೆ. ಆದರೆ ಇದನ್ನು ಲಕ್ಷಿಸದೆ ಹುಕ್ಕಾ ಪಾರ್ಲರ್ ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.
ಇದನ್ನೂ ಓದಿ : ಕುಂದಾಪುರ : ಪ್ರಧಾನಿ “ಪರೀಕ್ಷಾ ಪೇ ಚರ್ಚಾ’, ಚಾರಮಕ್ಕಿ ಶಾಲೆಯ ಅನುಷಾ ಆಯ್ಕೆ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…