ವಿಜಯಪುರ: ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ನ ಎಲ್ಲಾ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಒಬ್ಬರೇ ಅಭ್ಯರ್ಥಿಯನ್ನಾಗಿ ಘೋಷಿಸಿ, ಅವರ ಪರ ವ್ಯಾಪಕ ಪ್ರಚಾರ ಮಾಡಿದ್ದೇವೆ. ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್ ಆರ್ ನಾಯಕ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಆನಂದ ನ್ಯಾಮಗೌಡ, ರಾಜು ಆಲಗೂರ, ವಿಠ್ಠಲ ಕಟಕೊಂಡ ಸೇರಿದಂತೆ ಕಾಂಗ್ರೆಸ್ ನಾಯಕರು ಅವರವರ ಮತ ಕ್ಷೇತ್ರದಲ್ಲಿ ಸುನಿಲಗೌಡ ಪಾಟೀಲ ಪರ ವ್ಯಾಪಕ ಪ್ರಚಾರ ಮಾಡಿದ್ದಾರೆ. ಹೀಗಾಗಿ ಸುನೀಲಗೌಡ ಪಾಟೀಲ ಪರ ಮತದಾರರ ಒಲವು ಹೆಚ್ಚಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಆದಾಗ್ಯೂ ನಮ್ಮ ಪಕ್ಷದ ಅಭ್ಯರ್ಥಿ ಸುನೀಲ್ಗೌಡ 1000 ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಎಂಬಿ ಪಾಟೀಲ್, ಸುನೀಲ್ಗೌಡ 5 ಸಾವಿರ ಮತಗಳನ್ನು ಪಡೆಯಲಿದ್ದಾರೆ. ಎಲ್ಲರ ಪ್ರಯತ್ನದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದಾಗಿ ತಿಳಿಸಿದರು. ಪಂಚಾಯಿತಿ ರಾಜ್ ವ್ಯವಸ್ಥೆ ಗಾಂಧೀಜಿ ಕನಸು. ಹಳ್ಳಿಗಳ ಅಭಿವೃದ್ಧಿಯೇ ಗ್ರಾಮ ಸ್ವರಾಜ್ ಕನಸು ಎಂಬುದಾಗಿ ಅವರು ಕಂಡಿದ್ದರು. ಮುಂದೆ ಕಾಂಗ್ರೆಸ್ ಪಕ್ಷ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು ದೀನ ದಲಿತರಿಗೆ ಅವಕಾಶ ಕಲ್ಪಿಸಿ ಶಕ್ತಿ ತುಂಬಿತು. ನಂತರ ಬೇಲೂರು ಘೋಷಣೆ ಮೂಲಕ ಸೋನಿಯಾ ಗಾಂಧಿ ಅವರು ಈ ಕಾಯ್ದೆಗೆ ಶಕ್ತಿ ತುಂಬಿದರು. ನರೇಗಾ ಯೋಜನೆ ಜಾರಿಗೆ ಬಂತು. ತನ್ಮೂಲಕ ಉದ್ಯೋಗ ಸಿಕ್ಕಿತು. ಪಕ್ಷ ಕೊಡುಗೆ ನೀಡಿದೆ. ಹೀಗಾಗಿ ಅವಳಿ ಜಿಲ್ಲೆಯ ಮತದಾರರು ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಿದ ಕಾಂಗ್ರೆಸ್ ಪಕ್ಷ ಕೈ ಬಿಡಲ್ಲ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…