ಮೈಸೂರು : ರಾಜ್ಯದ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕಾಗಿ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಏಕಕಾಲದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮತ್ತೆ ಮನೆಗಳನ್ನು ಕಟ್ಟಿಕೊಡಲಾಗುತ್ತದೆ. ಈಗಾಗಲೇ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳನ್ನೇ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಡಿಸಿಗಳೇ ಅದರ ನೇತೃತ್ವ ವಹಿಸಿಕೊಂಡು ತ್ವರಿತವಾಗಿ ಕೆಲಸ ಮಾಡಲಿದ್ದಾರೆ. ಬೆಳಗಾವಿ, ಬಾಗಲಕೋಟೆ, ಮಡಿಕೇರಿ, ದೇವದುರ್ಗ ಸೇರಿದಂತೆ 102 ಕ್ಷೇತ್ರದಲ್ಲಿ ಹೆಚ್ಚಿನ ಮನೆ ಹಾನಿ ಉಂಟಾಗಿದೆ. ದುರಸ್ತಿಗೊಂಡ ಮನೆಗಳನ್ನು ರಿಪೇರಿ ಮಾಡಲಾಗುತ್ತದೆ. ಇದಕ್ಕಾಗಿ ರಾಜೀವ್ ಗಾಂಧಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…