ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ಬೆಂಗಳೂರು: ಕೊರೋನಾದ ಹೊಸ ಮಾದರಿ ವೈರಸ್ ನಿಂದಾಗ ರಾಜ್ಯ,ದೇಶದಲ್ಲಿ ಆತಂಕ ಎದುರಾಗಿದ್ದು, ವಿದೇಶಗಳಿಂದ ಬರುವವರ ಮೇಲೆ ನಿಗಾ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹೊಸ ಕೊರೋನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ರೂಪಾಂತರ ಇಡೀ ರಾಜ್ಯ ಮತ್ತು ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ ಹಾಗಾಗಿ ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ. ಯಾರೇ ಹೊರಗಡೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ನೋಡಿ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ ಎಂದರು.
ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಆ ಮಾದರಿ ಇಲ್ಲ ಅಗತ್ಯವಿಲ್ಲ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಎಚ್ಚರಿಕೆ ವಹಿಸುವುದನ್ನು ಬಿಟ್ಟು ಮತ್ಯಾವುದೇ ದಾರಿ ಇಲ್ಲವೆಂದು ತಿಳಿಸಿದರು.
