Featured

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

ಬೆಂಗಳೂರು: ಕೊರೋನಾದ ಹೊಸ ಮಾದರಿ ವೈರಸ್ ನಿಂದಾಗ ರಾಜ್ಯ,ದೇಶದಲ್ಲಿ ಆತಂಕ ಎದುರಾಗಿದ್ದು, ವಿದೇಶಗಳಿಂದ ಬರುವವರ ಮೇಲೆ‌ ನಿಗಾ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹೊಸ ಕೊರೋನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ರೂಪಾಂತರ ಇಡೀ ರಾಜ್ಯ ಮತ್ತು ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ ಹಾಗಾಗಿ ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ. ಯಾರೇ ಹೊರಗಡೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ನೋಡಿ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ ಎಂದರು.

ದೇಶಾದ್ಯಂತ ಈಗಾಗಲೇ ಅಲರ್ಟ್ ಇದೆ. ಪ್ರಧಾನಿ ಕೂಡಾ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ಎಲ್ಲಾ ರಾಜ್ಯಗಳಿಗೂ, ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ವೈರಸ್ ಹರಡದಂತೆ ಬೇಕಿರುವ ಎಚ್ಚರಿಕೆ ವಹಿಸುತ್ತೇವೆ. ಈ ವರ್ಷ ಹೊಸ ವರ್ಷ ಆಚರಣೆಯೇ ಇಲ್ಲ ಹೊಸ ವರ್ಷ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಬಿಡಲ್ಲ ಎಂದು ಅವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಆ ಮಾದರಿ ಇಲ್ಲ ಅಗತ್ಯವಿಲ್ಲ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಎಚ್ಚರಿಕೆ ವಹಿಸುವುದನ್ನು ಬಿಟ್ಟು ಮತ್ಯಾವುದೇ ದಾರಿ ಇಲ್ಲವೆಂದು ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago