ಬೆಂಗಳೂರು:ರಾಜ್ಯದಲ್ಲಿ ಒಂಬತ್ತನೇ ತರಗತಿ ಮತ್ತು ಪ್ರಥಮ ಪಿಯುಸಿ ತರಗತಿಯ ಆಫ್ ಲೈನ್ ಪಾಠಗಳನ್ನು ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಫೆಬ್ರವರಿ ಒಂದರಿಂದ ತರಗತಿಗಳು ಆರಂಭವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು.
ವಿಧಾನಸೌಧದಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಎರಡೂ ಇಲಾಖೆ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ ಈಗಾಗಲೇ 10ನೇ ತರಗತಿ ಹಾಗೂ ದ್ವಿತೀಯ ಪದವಿ ಪೂರ್ವ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿವೆ. ಅದರಂತೆ 9ನೇ ತರಗತಿ ಹಾಗೂ ಪ್ರಥಮ ಪದವಿ ಪೂರ್ವ ತರಗತಿಗಳು ನಡೆಯಲಿದ್ದು, ಹಾಜರಾತಿ ಕಡ್ಡಾಯವಲ್ಲ. 6ರಿಂದ ಎಂಟನೇ ತರಗತಿಯವರೆಗೆ ವಿದ್ಯಾಗಮ ತರಗತಿಗಳು ಮುಂದುವರಿಯಲಿದೆ. ಜೊತೆಗೆ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.
ಕಾಪು : ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮ ಫಲಕ ಉದ್ಘಾಟನೆ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…