Featured

ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದ್ದು , ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ : ಮಧು ಬಂಗಾರಪ್ಪ – Vishwanews24

ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದ್ದು , ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ : ಮಧು ಬಂಗಾರಪ್ಪ – Vishwanews24

ಶಿವಮೊಗ್ಗ: ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದೆ. ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಬದಲಾವಣೆಯ ವಾತವರಣ ಕಂಡುಬರುತ್ತಿದೆ. ಜನರಿಗೆ ಸುಳ್ಳು ಹೇಳಿ, ಬಿಜೆಪಿಯವರು ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಅದರ ಪರಿಣಾಮವಾಗಿ ಹಾನಗಲ್ ಉಪ ಚುನಾವಣೆ ಫಲಿತಾಂಶ ಬಂದಿದೆ.

ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಕಡೆ ಓಡಾಟ ಮಾಡುತ್ತಿದ್ದೇನೆ. ಆರ್.ಪ್ರಸನ್ನ ಕುಮಾರ್ ಮತ್ತು‌ ಭೀಮಣ್ಣ ನಾಯ್ಕ್ ಪರವಾಗಿ ಉತ್ತಮ ವಾತವರಣವಿದೆ. ಕಳೆದ ಆರು ವರ್ಷ ಅವಧಿಯಲ್ಲಿ ಪ್ರಸನ್ನ ಕುಮಾರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯತ್ ಸದಸ್ಯರು ನಾವು ಯಾಕದರೂ ಸದಸ್ಯರಾಗಿದ್ದೇವೆ ಎಂದು ಬೇಸತ್ತು ಹೋಗಿದ್ದಾರೆ. ಅನುದಾನ ಇಲ್ಲ, ಯಾವುದೇ ಕೆಲಸ ಇಲ್ಲ. ಜನರಿಂದ ಬಳಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಟ್ಟ ಮನೆಗಳಿಗೆ ಇಂದು ಸರ್ಕಾರ ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಫಲಾನುಭವಿಗಳು ಇವತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ಕೇಳುತ್ತಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಸರ್ಕಾರ ಕ್ರೀಯಾಯೋಜನೆ ರೂಪಿಸುವ ಕೆಲಸ ಮಾಡುತ್ತಿದೆ. ಹಾಗಾದರೆ ಗ್ರಾಮ ಪಂಚಾಯತ್ ಸದಸ್ಯರು ಗೆದ್ದು ಬಂದಿರುವುದು ಯಾವ ಕಾರಣಕ್ಕೆ.? ಬಿಜೆಪಿ ಬೆಂಬಲಿತ ಸದಸ್ಯರುಗಳೇ ಇಂದು ಬೇಸತ್ತು ಕಾಂಗ್ರೆಸ್ ಪರವಾಗಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿನ ಜೆಡಿಎಸ್ ಬೆಂಬಲಿತ ಸದಸ್ಯರುಗಳು ನಮ್ಮ ಪರವಾಗಿಯೇ ಇದ್ದಾರೆ. ಆರ್.ಪ್ರಸನ್ನಕುಮಾರ್ ಉತ್ತಮ ಅಂತರದಲ್ಲೇ ಈ ಬಾರಿ ಗೆಲ್ಲಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳ ಪರವಾಗಿ ಪರಿಷತ್ ನಲ್ಲಿ ಪ್ರಸನ್ನ ಕುಮಾರ್ ಧ್ವನಿಯಾಗಲಿದ್ದಾರೆ ಎಂದ ಮಧು ಬಂಗಾರಪ್ಪ ಹೇಳಿದರು.

Vishwa News 24

Recent Posts

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

2 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

2 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

2 hours ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

2 hours ago

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

2 hours ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

3 hours ago