ಮಂಡ್ಯ: ‘ಕೆಲ ಬಿಜೆಪಿ ಶಾಸಕರು ನನ್ನ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಅವರನ್ನು ನಮ್ಮ ಪಕ್ಷದತ್ತ ಹೇಗೆ ಸೆಳೆಯಬೇಕು ಎಂಬುದು ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ವರಿಷ್ಠರು ಸೂಚನೆ ಕೊಟ್ಟರೆ ಆಪರೇಷನ್ ಜೆಡಿಎಸ್ ಮಾಡಿ ತೋರಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡುತ್ತೇವೆ’ ಎಂದು ನಾಗಮಂಗಲ ಶಾಸಕ ಸುರೇಶ್ಗೌಡ ಹೇಳಿದರು.
ಮದ್ದೂರು ತಾಲ್ಲೂಕು ಆಬಲವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಬಿಜೆಪಿ ಸೇರುವಂತೆ ನನಗೂ ಕೆಲವು ಬ್ರೋಕರ್ಗಳು ಆಮಿಷ ತೋರಿಸಿದ್ದರು. ಆದರೆ, ನಾನು ಮಾರಾಟಕ್ಕಿಲ್ಲ ಎಂದು ಅವರಿಗೆ ಹೇಳಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಬಿಜೆಪಿ ಮುಖಂಡರು ಜೆಡಿಎಸ್, ಕಾಂಗ್ರೆಸ್ ಶಾಸಕರಿಗೆ ಆಮಿಷ ತೋರುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಹಾಗೂ ಕೆಲ ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಆಮಿಷ ಒಡ್ಡಿದ್ದಾರೆ’ ಎಂದು ಹೇಳಿದರು.
‘ಬ್ರೋಕರ್ಗಳು ಎಲ್ಲಾ ಪಕ್ಷದವರ ಜೊತೆ ಸ್ನೇಹದಿಂದ ಇರುತ್ತಾರೆ. ಸ್ನೇಹಿತರ ಸೋಗಿನಲ್ಲಿ ಬಿಜೆಪಿ ಸೇರುವಂತೆ ಒತ್ತಡ ತರುತ್ತಾರೆ. ಅದರಂತೆ ನನಗೂ ಆಹ್ವಾನ ಕೊಟ್ಟರು, ಆದರೆ ನಾನು ತಿರಸ್ಕರಿಸಿದೆ. ಆಪರೇಷನ್ ಮಾಡುವುದು ಕಷ್ಟವಲ್ಲ, ಆದರೆ ಮತ್ತೊಮ್ಮೆ ಗೆದ್ದು ಬರುವುದು ಕಷ್ಟ’ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…