ಮಂಡ್ಯ: ‘ಕೆಲ ಬಿಜೆಪಿ ಶಾಸಕರು ನನ್ನ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಅವರನ್ನು ನಮ್ಮ ಪಕ್ಷದತ್ತ ಹೇಗೆ ಸೆಳೆಯಬೇಕು ಎಂಬುದು ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ವರಿಷ್ಠರು ಸೂಚನೆ ಕೊಟ್ಟರೆ ಆಪರೇಷನ್ ಜೆಡಿಎಸ್ ಮಾಡಿ ತೋರಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡುತ್ತೇವೆ’ ಎಂದು ನಾಗಮಂಗಲ ಶಾಸಕ ಸುರೇಶ್ಗೌಡ ಹೇಳಿದರು.
ಮದ್ದೂರು ತಾಲ್ಲೂಕು ಆಬಲವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಬಿಜೆಪಿ ಸೇರುವಂತೆ ನನಗೂ ಕೆಲವು ಬ್ರೋಕರ್ಗಳು ಆಮಿಷ ತೋರಿಸಿದ್ದರು. ಆದರೆ, ನಾನು ಮಾರಾಟಕ್ಕಿಲ್ಲ ಎಂದು ಅವರಿಗೆ ಹೇಳಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಬಿಜೆಪಿ ಮುಖಂಡರು ಜೆಡಿಎಸ್, ಕಾಂಗ್ರೆಸ್ ಶಾಸಕರಿಗೆ ಆಮಿಷ ತೋರುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಹಾಗೂ ಕೆಲ ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಆಮಿಷ ಒಡ್ಡಿದ್ದಾರೆ’ ಎಂದು ಹೇಳಿದರು.
‘ಬ್ರೋಕರ್ಗಳು ಎಲ್ಲಾ ಪಕ್ಷದವರ ಜೊತೆ ಸ್ನೇಹದಿಂದ ಇರುತ್ತಾರೆ. ಸ್ನೇಹಿತರ ಸೋಗಿನಲ್ಲಿ ಬಿಜೆಪಿ ಸೇರುವಂತೆ ಒತ್ತಡ ತರುತ್ತಾರೆ. ಅದರಂತೆ ನನಗೂ ಆಹ್ವಾನ ಕೊಟ್ಟರು, ಆದರೆ ನಾನು ತಿರಸ್ಕರಿಸಿದೆ. ಆಪರೇಷನ್ ಮಾಡುವುದು ಕಷ್ಟವಲ್ಲ, ಆದರೆ ಮತ್ತೊಮ್ಮೆ ಗೆದ್ದು ಬರುವುದು ಕಷ್ಟ’ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…