Featured

ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡಲು “ಆಪರೇಷನ್‌ ಜೆಡಿಎಸ್‌” ಮಾಡುತ್ತೇವೆ: ಸುರೇಶ್‌ಗೌಡ

ಮಂಡ್ಯ: ‘ಕೆಲ ಬಿಜೆಪಿ ಶಾಸಕರು ನನ್ನ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಅವರನ್ನು ನಮ್ಮ ಪಕ್ಷದತ್ತ ಹೇಗೆ ಸೆಳೆಯಬೇಕು ಎಂಬುದು ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ವರಿಷ್ಠರು ಸೂಚನೆ ಕೊಟ್ಟರೆ ಆಪರೇಷನ್‌ ಜೆಡಿಎಸ್‌ ಮಾಡಿ ತೋರಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡುತ್ತೇವೆ’ ಎಂದು ನಾಗಮಂಗಲ ಶಾಸಕ ಸುರೇಶ್‌ಗೌಡ ಹೇಳಿದರು.

ಮದ್ದೂರು ತಾಲ್ಲೂಕು ಆಬಲವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಿಜೆಪಿ ಸೇರುವಂತೆ ನನಗೂ ಕೆಲವು ಬ್ರೋಕರ್‌ಗಳು ಆಮಿಷ ತೋರಿಸಿದ್ದರು. ಆದರೆ, ನಾನು ಮಾರಾಟಕ್ಕಿಲ್ಲ ಎಂದು ಅವರಿಗೆ ಹೇಳಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಬಿಜೆಪಿ ಮುಖಂಡರು ಜೆಡಿಎಸ್‌, ಕಾಂಗ್ರೆಸ್‌ ಶಾಸಕರಿಗೆ ಆಮಿಷ ತೋರುತ್ತಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌ ಹಾಗೂ ಕೆಲ ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಆಮಿಷ ಒಡ್ಡಿದ್ದಾರೆ’ ಎಂದು ಹೇಳಿದರು.

‘ಬ್ರೋಕರ್‌ಗಳು ಎಲ್ಲಾ ಪಕ್ಷದವರ ಜೊತೆ ಸ್ನೇಹದಿಂದ ಇರುತ್ತಾರೆ. ಸ್ನೇಹಿತರ ಸೋಗಿನಲ್ಲಿ ಬಿಜೆಪಿ ಸೇರುವಂತೆ ಒತ್ತಡ ತರುತ್ತಾರೆ. ಅದರಂತೆ ನನಗೂ ಆಹ್ವಾನ ಕೊಟ್ಟರು, ಆದರೆ ನಾನು ತಿರಸ್ಕರಿಸಿದೆ. ಆಪರೇಷನ್‌ ಮಾಡುವುದು ಕಷ್ಟವಲ್ಲ, ಆದರೆ ಮತ್ತೊಮ್ಮೆ ಗೆದ್ದು ಬರುವುದು ಕಷ್ಟ’ ಎಂದರು.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

4 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

6 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

7 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

7 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

7 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

7 hours ago