Featured

ರಾಜ್ಯದಲ್ಲಿ ಬಿಜೆಪಿ ಬಹುಮತ ಪಡೆಯದಿರಲು ಸ್ವಯಂಕೃತ ಅಪರಾಧ ಕಾರಣ: ಬಿಎಸ್ ವೈ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕೆ ಬೇಕಾದ ಅಗತ್ಯ ಸಂಖ್ಯೆಯನ್ನು ಪಡೆಯದಿರಲು ಪಕ್ಷದ ಸ್ವಯಂಕೃತ ಅಪರಾಧವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಬಿಎಸ್ ವೈ, ವಿಧಾನಸಭೆ ಚುವಾವಣೆ ವೇಳೆ ಮೋದಿ ಅಲೆ ಇದ್ದರೂ ನಾವು ಕನಿಷ್ಠ 135 ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಮಿತ್ ಶಾ, ಬೇರೆ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ರಾಜ್ಯ ಪ್ರಚಾರ ಮಾಡಿದರು. ಆದರೂ ನಾವು 104 ಸ್ಥಾನ ಗೆದ್ದು ಪ್ರತಿಪಕ್ಷದಲ್ಲಿ ಕುತುಕೊಳ್ಳುವ ಪರಿಸ್ಥಿತಿ ಬಂದಿದೆ. ಈಗಲೂ ಕಾಲ ಮಿಂಚಿಲ್ಲ, ಬಿಜೆಪಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡಬಹುದು. ನಮ್ಮ 104 ಶಾಸಕರು ಮತ್ತು ಎಂಟು ಜನ ಪರಿಷತ್ ಸದಸ್ಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ನಾವು ನಲ್ವತ್ತು ಸ್ಥಾನಗಳಿಂದ 104 ಸ್ಥಾನ ತಲುಪಿದ್ದೇವೆ. ಕಾಂಗ್ರೆಸ್ 123 ರಿಂದ 80ಕ್ಕೆ ಕುಸಿದಿದೆ. ಅಲ್ಲದೆ 17 ಸಚಿವರು ಹೀನಾಯ ಸೋಲು ಅನುಭವಿಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕೇವಲ 1600 ಮತಗಳಿಂದ ಮಾತ್ರ ಗೆದ್ದಿದ್ದಾರೆ. ಆದರೆ ನಾವು 113 ಸ್ಥಾನ ಗೆಲ್ಲಲಿಕ್ಕಾಗಲಿಲ್ಲ ಎಂಬ ನೋವಿದೆ ಎಂದರು.
ಈ ದೇಶದಲ್ಲಿ ಚುನಾವಣೆಯಲ್ಲಿ ಯಾರಿಗೂ ಬಹುಮತ ಬಾರದಿದ್ದಾಗ ಸಿಂಗಲ್ ಲಾರ್ಜೆಸ್ಟ್‌ ಪಾರ್ಟಿಗೆ ಅವಕಾಶ ಕೊಡುವುದು ನಮಗೆಲ್ಲ ಗೊತ್ತು. ಸುಪ್ರೀಂಕೋರ್ಟ್ ನಲ್ಲಿ ಮಧ್ಯರಾತ್ರಿ ಈ ಕುರಿತು ಚರ್ಚೆ ಆಯಿತು. ದೇಶದ ಇತಿಹಾಸದಲ್ಲಿ 15 ದಿನ ಬಹುಮತ ಸಾಬೀತಿಗೆ ಅವಕಾಶ ಇದ್ದರೂ 24 ಗಂಟೆ ಅವಕಾಶ ಕೊಡುವ ರೀತಿ ಮಾಡಿದ್ದನ್ನು ನಾನು ಈವರೆಗೂ ಕಂಡಿರಲಿಲ್ಲ ಎಂದು ಪರೋಕ್ಷವಾಗಿ ಸರ್ವೋಚ್ಚ ನ್ಯಾಯಾಲಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

8 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

8 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

8 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

8 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

9 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

9 hours ago