ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಪ್ರಮುಖ ಕಾರಣ. ನನಗೆ ಯಡಿಯೂರಪ್ಪ ಅವ್ರ ಮೇಲೆ ನೂರಕ್ಕೆ ನೂರರಷ್ಟು ನಂಬಿಕೆಯಿದ್ದು, ನನ್ನನ್ನ ಸಂಪುಟದಿಂದ ಕೈಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
ಸಚಿವ ಸಂಪುಟದ ಸರ್ಜರಿ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ ಸಂಪುಟದಿಂದ ನನ್ನನ್ನ ಕೈಬಿಡುವ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಮಂತ್ರಿ ಸ್ಥಾನ ನೀಡಿದಾಗ ನೀನೂ ಇನ್ನು 3 ವರ್ಷಗಳ ಕಾಲ ಮಂತ್ರಿಯಾಗಿರ್ತೀಯಾ ಅಂತಾ ಸಿಎಂ ಹೇಳಿದ್ರು. ಹಾಗಾಗಿ ಸಿಎಂ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಎರಡುವರೆ ವರ್ಷಗಳ ಕಾಲ ನಾನೇ ಮಂತ್ರಿಯಾಗಿರ್ತೀನಿ. ಯಡಿಯೂರಪ್ಪರನ್ನೂ ಭೇಟಿಯಾಗಿ ಮಾತನಾಡ್ತೇನೆ ಎಂದರು.
ಇನ್ನು ನೂರಕ್ಕೆ ನೂರರಷ್ಟು ನನ್ನನ್ನ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ಯಾಕಂದ್ರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನೇ ಪ್ರಮುಖ ಕಾರಣ. ಸಮ್ಮಿಶ್ರ ಸರ್ಕಾರವನ್ನ ತೊರೆದು ಮೊದಲು ರಾಜೀನಾಮೆ ಕೊಟ್ಟವನು ನಾನು. ನಂತರ ಎಲ್ಲರೂ ಧೈರ್ಯ ಮಾಡಿ ರಾಜೀನಾಮೆ ಕೊಟ್ಟರು ಎಂದು ವಿಕಾಸಸೌಧದಲ್ಲಿ ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…