ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಹೊಸ ಪ್ಲ್ಯಾನ್ವೊಂದನ್ನು ಮಾಡಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸೂಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಭ್ರೂಣಹತ್ಯೆ ಸಂಪೂರ್ಣ ನೆಲಸಮ ಮಾಡಲು ಆರೋಗ್ಯ ಇಲಾಖೆ ಈ ಮಾಸ್ಟರ್ ಪ್ಲ್ಯಾನ್ ಸಿದ್ದವಾಗಿದ್ದು, ಆ ಮೂಲಕ ಭ್ರೂಣಹತ್ಯೆ ಕಿರಾತಕರ ಮಟ್ಟಹಾಕಲು ಹೊಸ ತಂತ್ರರೂಪಿಸಲಾಗಿದೆ. ಭ್ರೂಣಹತ್ಯೆ ಹಾಗೂ ಪತ್ತೆ ಯಾವುದೇ ಭಾಗದಲ್ಲಿ, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆ ಜಸ್ಟ್ ಮಾಹಿತಿ ನೀಡಿದರೆ ಸಾಕು.
ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ಹಣ ನೀಡುವುದರೊಂದಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಕೂಡ ಗೌಪ್ಯವಾಗಿ ಇಡಲಾಗುತ್ತದೆ. ಈ ಹಿಂದೆ ಗುಪ್ತಕಾರ್ಯಚರಣೆಗೆ 50 ಸಾವಿರ ರೂ. ಹಣ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನ ಒಂದು ಲಕ್ಷಕ್ಕೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…