ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಹೊಸ ಪ್ಲ್ಯಾನ್ವೊಂದನ್ನು ಮಾಡಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸೂಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಭ್ರೂಣಹತ್ಯೆ ಸಂಪೂರ್ಣ ನೆಲಸಮ ಮಾಡಲು ಆರೋಗ್ಯ ಇಲಾಖೆ ಈ ಮಾಸ್ಟರ್ ಪ್ಲ್ಯಾನ್ ಸಿದ್ದವಾಗಿದ್ದು, ಆ ಮೂಲಕ ಭ್ರೂಣಹತ್ಯೆ ಕಿರಾತಕರ ಮಟ್ಟಹಾಕಲು ಹೊಸ ತಂತ್ರರೂಪಿಸಲಾಗಿದೆ. ಭ್ರೂಣಹತ್ಯೆ ಹಾಗೂ ಪತ್ತೆ ಯಾವುದೇ ಭಾಗದಲ್ಲಿ, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆ ಜಸ್ಟ್ ಮಾಹಿತಿ ನೀಡಿದರೆ ಸಾಕು.
ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ಹಣ ನೀಡುವುದರೊಂದಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಕೂಡ ಗೌಪ್ಯವಾಗಿ ಇಡಲಾಗುತ್ತದೆ. ಈ ಹಿಂದೆ ಗುಪ್ತಕಾರ್ಯಚರಣೆಗೆ 50 ಸಾವಿರ ರೂ. ಹಣ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನ ಒಂದು ಲಕ್ಷಕ್ಕೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…