ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಹೊಸ ಪ್ಲ್ಯಾನ್ವೊಂದನ್ನು ಮಾಡಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸೂಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಭ್ರೂಣಹತ್ಯೆ ಸಂಪೂರ್ಣ ನೆಲಸಮ ಮಾಡಲು ಆರೋಗ್ಯ ಇಲಾಖೆ ಈ ಮಾಸ್ಟರ್ ಪ್ಲ್ಯಾನ್ ಸಿದ್ದವಾಗಿದ್ದು, ಆ ಮೂಲಕ ಭ್ರೂಣಹತ್ಯೆ ಕಿರಾತಕರ ಮಟ್ಟಹಾಕಲು ಹೊಸ ತಂತ್ರರೂಪಿಸಲಾಗಿದೆ. ಭ್ರೂಣಹತ್ಯೆ ಹಾಗೂ ಪತ್ತೆ ಯಾವುದೇ ಭಾಗದಲ್ಲಿ, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆ ಜಸ್ಟ್ ಮಾಹಿತಿ ನೀಡಿದರೆ ಸಾಕು.
ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ಹಣ ನೀಡುವುದರೊಂದಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಕೂಡ ಗೌಪ್ಯವಾಗಿ ಇಡಲಾಗುತ್ತದೆ. ಈ ಹಿಂದೆ ಗುಪ್ತಕಾರ್ಯಚರಣೆಗೆ 50 ಸಾವಿರ ರೂ. ಹಣ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನ ಒಂದು ಲಕ್ಷಕ್ಕೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…