Featured

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ : ಡಾ. ಕೆ. ಸುಧಾಕರ್ – Vishwanews24

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ : ಡಾ. ಕೆ. ಸುಧಾಕರ್ – Vishwanews24

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಯಾವುದೇ ಲಾಕ್‍ಡೌನ್ ಇಲ್ಲ. ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹೊಸ ತಳಿ ಓಮಿಕ್ರಾನ್ ಭೀತಿ ಶುರುವಾಗಿದ್ದು, ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿನೋಮಿಕ್ ಸೀಕ್ವೆನ್ಸ್ ವರದಿ ಬರುವುದಕ್ಕೆ ಇನ್ನೂ ಒಂದು ವಾರ ಬೇಕಾಗುತ್ತದೆ. ಡಿಸೆಂಬರ್ 1 ರಂದು ನಮಗೆ ವರದಿ ಬರುತ್ತದೆ. ಈಗಾಗಲೇ 12 ದೇಶಗಳಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ಅಂತರಾಷ್ಟ್ರೀಯ ವಿಮಾನಗಳ ಮೂಲಕ ರಾಜ್ಯಕ್ಕೆ ಪ್ರಯಾಣಿಕರು ಬರುತ್ತಿದ್ದಾರೆ. ಎಲ್ಲರನ್ನೂ ಸಹ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 12-13 ದಿನಗಳಿಂದ ಬಂದವರ ಮೇಲೆ ನಿಗಾ ಇಡಲಾಗಿದ್ದು, ಅವರ ಫೋನ್ ನಂಬರ್‌ರನ್ನು ಟ್ರೇಸ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆಫ್ರಿಕಾದಲ್ಲಿ ಇರುವ ನನ್ನ ವೈದ್ಯ ಸ್ನೇಹಿತರ ಜೊತೆ ಮಾತಾಡಿದ್ದೇನೆ. ಹೊಸ ತಳಿ ಬೇಗ ಹರಡುತ್ತದೆ. ಆದರೆ ಡೆಲ್ಟಾ ಅಷ್ಟು ಭೀಕರತೆ ಇರುವುದಿಲ್ಲ. ವಾಂತಿ, ಪಲ್ಸ್ ರೇಟ್ ಜಾಸ್ತಿಯಾಗುವುದು, ತಲೆ ಸುತ್ತುವುದು, ಆಯಾಸ ಆಗುವುದು ಇದು ಹೊಸ ತಳಿ ರೋಗ ಲಕ್ಷಣಗಳಾಗಿದೆ. ಡೆಲ್ಟಾ ರೀತಿ ಟೇಸ್ಟ್, ವಾಸನೆ ಇಲ್ಲದೆ ಇರುವ ಲಕ್ಷಣ ಇದರಲ್ಲಿ ಇರುವುದಿಲ್ಲ. ಹೊಸ ತಳಿಯಲ್ಲಿ ಐಸಿಯು ಕೇಸ್ ಕಡಿಮೆ ಇರುತ್ತದೆ. ಹೊಸ ತಳಿ ಡೆಲ್ಟಾಗಿಂತ ತೀವ್ರತೆ ಕಡಿಮೆ ಇರುತ್ತದೆ ಎಂದು ತಿಳಿಸಿದ್ದಾರೆ. ಆದರೆ ಐಸಿಎಂಆರ್ ವರದಿ ಬರುವವರೆಗೂ ನಾವು ಈ ಬಗ್ಗೆ ಅಧಿಕೃತವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಯಾವುದೇ ಲಾಕ್‍ಡೌನ್ ಮಾಡುವ ಪ್ರಸ್ತಾಪವೇ ಸರ್ಕಾರ ಮುಂದೆ ಇಲ್ಲ. ಒಂದು ವೇಳೆ ಲಾಕ್‍ಡೌನ್ ಕುರಿತಂತೆ ವದಂತಿ ಹಬ್ಬಿಸಿದವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಜನ ಬಹಳ ನಷ್ಟ ಅನುಭವಿಸುದ್ದಾರೆ. ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ಮತ್ತೆ, ಮತ್ತೆ ಆತಂಕ ಸೃಷ್ಟಿ ಮಾಡೋದು ಬೇಡ. ಸಾಮಾಜಿಕ ಜಾಲತಾಣಗಳು ಈ ಬಗ್ಗೆ ಎಚ್ಚರವರಿಸಬೇಕು. ಸಾಮಾಜಿಕ ಜಾಲತಾಣಗಳು ತಪ್ಪು ಸುದ್ದಿ ಹರಡಿಸಬಾರದು. ಮಾಧ್ಯಮಗಳು ಎಚ್ಚರಿಕೆ, ಜಾಗೃತಿ ಕೊಡುವ ಕೆಲಸ ಮಾಡುತ್ತಿದೆ ಅದನ್ನು ಮುಂದುವರೆಸಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

 

Vishwa News 24

Recent Posts

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

18 minutes ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

22 minutes ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

36 minutes ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

48 minutes ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

58 minutes ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

1 hour ago