Featured

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ : ಡಾ. ಕೆ. ಸುಧಾಕರ್ – Vishwanews24

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ : ಡಾ. ಕೆ. ಸುಧಾಕರ್ – Vishwanews24

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಯಾವುದೇ ಲಾಕ್‍ಡೌನ್ ಇಲ್ಲ. ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹೊಸ ತಳಿ ಓಮಿಕ್ರಾನ್ ಭೀತಿ ಶುರುವಾಗಿದ್ದು, ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿನೋಮಿಕ್ ಸೀಕ್ವೆನ್ಸ್ ವರದಿ ಬರುವುದಕ್ಕೆ ಇನ್ನೂ ಒಂದು ವಾರ ಬೇಕಾಗುತ್ತದೆ. ಡಿಸೆಂಬರ್ 1 ರಂದು ನಮಗೆ ವರದಿ ಬರುತ್ತದೆ. ಈಗಾಗಲೇ 12 ದೇಶಗಳಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ಅಂತರಾಷ್ಟ್ರೀಯ ವಿಮಾನಗಳ ಮೂಲಕ ರಾಜ್ಯಕ್ಕೆ ಪ್ರಯಾಣಿಕರು ಬರುತ್ತಿದ್ದಾರೆ. ಎಲ್ಲರನ್ನೂ ಸಹ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 12-13 ದಿನಗಳಿಂದ ಬಂದವರ ಮೇಲೆ ನಿಗಾ ಇಡಲಾಗಿದ್ದು, ಅವರ ಫೋನ್ ನಂಬರ್‌ರನ್ನು ಟ್ರೇಸ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆಫ್ರಿಕಾದಲ್ಲಿ ಇರುವ ನನ್ನ ವೈದ್ಯ ಸ್ನೇಹಿತರ ಜೊತೆ ಮಾತಾಡಿದ್ದೇನೆ. ಹೊಸ ತಳಿ ಬೇಗ ಹರಡುತ್ತದೆ. ಆದರೆ ಡೆಲ್ಟಾ ಅಷ್ಟು ಭೀಕರತೆ ಇರುವುದಿಲ್ಲ. ವಾಂತಿ, ಪಲ್ಸ್ ರೇಟ್ ಜಾಸ್ತಿಯಾಗುವುದು, ತಲೆ ಸುತ್ತುವುದು, ಆಯಾಸ ಆಗುವುದು ಇದು ಹೊಸ ತಳಿ ರೋಗ ಲಕ್ಷಣಗಳಾಗಿದೆ. ಡೆಲ್ಟಾ ರೀತಿ ಟೇಸ್ಟ್, ವಾಸನೆ ಇಲ್ಲದೆ ಇರುವ ಲಕ್ಷಣ ಇದರಲ್ಲಿ ಇರುವುದಿಲ್ಲ. ಹೊಸ ತಳಿಯಲ್ಲಿ ಐಸಿಯು ಕೇಸ್ ಕಡಿಮೆ ಇರುತ್ತದೆ. ಹೊಸ ತಳಿ ಡೆಲ್ಟಾಗಿಂತ ತೀವ್ರತೆ ಕಡಿಮೆ ಇರುತ್ತದೆ ಎಂದು ತಿಳಿಸಿದ್ದಾರೆ. ಆದರೆ ಐಸಿಎಂಆರ್ ವರದಿ ಬರುವವರೆಗೂ ನಾವು ಈ ಬಗ್ಗೆ ಅಧಿಕೃತವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಯಾವುದೇ ಲಾಕ್‍ಡೌನ್ ಮಾಡುವ ಪ್ರಸ್ತಾಪವೇ ಸರ್ಕಾರ ಮುಂದೆ ಇಲ್ಲ. ಒಂದು ವೇಳೆ ಲಾಕ್‍ಡೌನ್ ಕುರಿತಂತೆ ವದಂತಿ ಹಬ್ಬಿಸಿದವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಜನ ಬಹಳ ನಷ್ಟ ಅನುಭವಿಸುದ್ದಾರೆ. ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ಮತ್ತೆ, ಮತ್ತೆ ಆತಂಕ ಸೃಷ್ಟಿ ಮಾಡೋದು ಬೇಡ. ಸಾಮಾಜಿಕ ಜಾಲತಾಣಗಳು ಈ ಬಗ್ಗೆ ಎಚ್ಚರವರಿಸಬೇಕು. ಸಾಮಾಜಿಕ ಜಾಲತಾಣಗಳು ತಪ್ಪು ಸುದ್ದಿ ಹರಡಿಸಬಾರದು. ಮಾಧ್ಯಮಗಳು ಎಚ್ಚರಿಕೆ, ಜಾಗೃತಿ ಕೊಡುವ ಕೆಲಸ ಮಾಡುತ್ತಿದೆ ಅದನ್ನು ಮುಂದುವರೆಸಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

 

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

2 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

2 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

2 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

2 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

3 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

3 hours ago