Featured

ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ !!

ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡು ಭಾಗದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಕಂಡು ಬರಲಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 187 ಪ್ರಕರಣಗಳು ಕಂಡು ಬಂದಿದ್ದವು. ಕಳೆದ ವರ್ಷಕ್ಕೆ ಹೋಲಿಸಿಕೊಂಡಲ್ಲಿ ಈ ವರ್ಷ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಬಿ.ಜಿ. ಪ್ರಕಾಶ್‌ಕುಮಾರ್‌ ತಿಳಿಸಿದ್ದಾರೆ.

ಇಲಿ ಜ್ವರವು ಬ್ಯಾಕ್ಟೀರಿಯಾಗಳ ಮೂಲಕ ಹರಡಲಿದ್ದು, ಕಾಯಿಲೆ ವೈರಲ್‌ ಆಗುವುದಿಲ್ಲ. ಸೂಕ್ತ ಚಿಕಿತ್ಸೆ ಇರುವುದರಿಂದ ಜನರು ಗಾಬರಿಯಾಗುವ ಅವಶ್ಯವಿಲ್ಲ. ಆದರೆ, ಮಳೆಗಾಲವಾಗಿರುವ ಕಾರಣ ಮನೆಯ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಪಾತ್ರೆಗಳು ಮತ್ತು ಆಹಾರ ಪದಾರ್ಥಗಳ ಪಾತ್ರೆಗಳನ್ನು ಮುಚ್ಚಿಡುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇಲಿ, ಹೆಗ್ಗಣಗಳ ಮಲ-ಮೂತ್ರಗಳು ಮಿಶ್ರಣವಾಗಿರುವ ನೀರು ಮತ್ತು ಮಣ್ಣನ್ನು ಮನುಷ್ಯರು ಬರಿಗಾಲಲ್ಲಿ ತುಳಿಯುವುದರಿಂದ ಕಾಯಿಲೆ ಹರಡುವ ಸಾಧ್ಯತೆಗಳಿವೆ. ಕಾಲಿನಲ್ಲಿ ಗಾಯವಾಗಿರುವ ಮತ್ತು ಚರ್ಮ ಒಡೆದಿರುವವರಿಗೆ ಹೆಚ್ಚಿನದಾಗಿ ಕಾಣಿಸಿಕೊಳ್ಳಲಿವೆ. ಕೃಷಿ ಕಾರ್ಮಿಕರು ಸ್ವಲ್ಪ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಲಕ್ಷಣಗಳು: ಜ್ವರ, ಮೈ ಕೈ ನೋವು, ತಲೆ ನೋವು, ರಕ್ತಸ್ರಾವ, ಜಾಂಡೀಸ್‌, ಉಸಿರಾಟದ ತೊಂದರೆಗಳು ಕಂಡುಬರುವುದು ರೋಗದ ಲಕ್ಷಣವಾಗಿದೆ. ಇಂತಹ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಿ ರೋಗ ಪತ್ತೆ ಹಚ್ಚಲಾಗುತ್ತಿದೆ ಎಂದು ಡಾ. ಬಿ.ಜಿ. ಪ್ರಕಾಶ್‌ ಕುಮಾರ್‌ ತಿಳಿಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

13 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

14 hours ago