Featured

ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ !!

ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡು ಭಾಗದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಕಂಡು ಬರಲಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 187 ಪ್ರಕರಣಗಳು ಕಂಡು ಬಂದಿದ್ದವು. ಕಳೆದ ವರ್ಷಕ್ಕೆ ಹೋಲಿಸಿಕೊಂಡಲ್ಲಿ ಈ ವರ್ಷ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಬಿ.ಜಿ. ಪ್ರಕಾಶ್‌ಕುಮಾರ್‌ ತಿಳಿಸಿದ್ದಾರೆ.

ಇಲಿ ಜ್ವರವು ಬ್ಯಾಕ್ಟೀರಿಯಾಗಳ ಮೂಲಕ ಹರಡಲಿದ್ದು, ಕಾಯಿಲೆ ವೈರಲ್‌ ಆಗುವುದಿಲ್ಲ. ಸೂಕ್ತ ಚಿಕಿತ್ಸೆ ಇರುವುದರಿಂದ ಜನರು ಗಾಬರಿಯಾಗುವ ಅವಶ್ಯವಿಲ್ಲ. ಆದರೆ, ಮಳೆಗಾಲವಾಗಿರುವ ಕಾರಣ ಮನೆಯ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಪಾತ್ರೆಗಳು ಮತ್ತು ಆಹಾರ ಪದಾರ್ಥಗಳ ಪಾತ್ರೆಗಳನ್ನು ಮುಚ್ಚಿಡುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇಲಿ, ಹೆಗ್ಗಣಗಳ ಮಲ-ಮೂತ್ರಗಳು ಮಿಶ್ರಣವಾಗಿರುವ ನೀರು ಮತ್ತು ಮಣ್ಣನ್ನು ಮನುಷ್ಯರು ಬರಿಗಾಲಲ್ಲಿ ತುಳಿಯುವುದರಿಂದ ಕಾಯಿಲೆ ಹರಡುವ ಸಾಧ್ಯತೆಗಳಿವೆ. ಕಾಲಿನಲ್ಲಿ ಗಾಯವಾಗಿರುವ ಮತ್ತು ಚರ್ಮ ಒಡೆದಿರುವವರಿಗೆ ಹೆಚ್ಚಿನದಾಗಿ ಕಾಣಿಸಿಕೊಳ್ಳಲಿವೆ. ಕೃಷಿ ಕಾರ್ಮಿಕರು ಸ್ವಲ್ಪ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಲಕ್ಷಣಗಳು: ಜ್ವರ, ಮೈ ಕೈ ನೋವು, ತಲೆ ನೋವು, ರಕ್ತಸ್ರಾವ, ಜಾಂಡೀಸ್‌, ಉಸಿರಾಟದ ತೊಂದರೆಗಳು ಕಂಡುಬರುವುದು ರೋಗದ ಲಕ್ಷಣವಾಗಿದೆ. ಇಂತಹ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಿ ರೋಗ ಪತ್ತೆ ಹಚ್ಚಲಾಗುತ್ತಿದೆ ಎಂದು ಡಾ. ಬಿ.ಜಿ. ಪ್ರಕಾಶ್‌ ಕುಮಾರ್‌ ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago