Featured

ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ : ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ  ನಡೆಯುತ್ತಿದ್ದ ಅಕ್ರಮ ದಂಧೆ  – Vishwanews24

ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ ; ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ  ನಡೆಯುತ್ತಿದ್ದ ಅಕ್ರಮ ದಂಧೆ

ಪಾಂಡವಪುರ : ಕಳೆದ ಅಕ್ಟೋಬರ್ ನಲ್ಲಿ ಮಂಡ್ಯ ತಾಲೂಕಿನ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣಲಿಂಗ ಪತ್ತೆ ದಂಧೆ ಬೆಳಕಿಗೆ ಬಂದ ಕೆಲವೇ ತಿಂಗಳಲ್ಲಿ ಪಾಂಡವಪುರದಲ್ಲಿ ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ.ಪಾಂಡವಪುರದ ಸರ್ಕಾರಿ ಆಸ್ಪತ್ರೆಯ ಕ್ವಾರ್ಟಸ್ ನಲ್ಲಿಯೇ ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ವ್ಯೂಹವೊಂದನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ಮೇ 5ರ ತಡರಾತ್ರಿ ಭೇದಿಸಿದ್ದಾರೆ.

ಖಚಿತ ಮಾಹಿತಿಯನ್ನು ಆಧರಿಸಿ ಪಾಂಡವಪುರದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಅರವಿಂದ್ ನೇತೃತ್ವದಲ್ಲಿ ಮೇ 6ರ ತಡರಾತ್ರಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರನ್ನು ಹಾಗೂ ಅವರು ಬಳಸುತ್ತಿದ್ದ ಯಂತ್ರೋಪಕರಣಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾಳಿಯ ವೇಳೆ ಮೈಸೂರು ಮೂಲದ ಮಹಿಳೆಯೊಬ್ಬರು ಅಲ್ಲಿ ಭ್ರೂಣಲಿಂಗ ಪರೀಕ್ಷೆಗೆ ಒಳಗಾಗಿದ್ದರು. ಡಾ. ಮೋಹನ್ ಹಾಗೂ ಡಾ. ಅರವಿಂದ್ ಹಾಗೂ ಪೊಲೀಸರು ಆ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪಾಂಡವಪುರ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ವಾಹನ ಚಾಲಕ ಆನಂದ್, ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿದ್ದ ‘ಡಿ’ ಗ್ರೂಪ್ ನ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಅವರು ಮಾತ್ರವಲ್ಲದೆ, ಕೆಲವು ವೈದ್ಯ ಸಿಬ್ಬಂದಿಯೂ ಷಾಮೀಲಾಗಿರುವ ಅನುಮಾನಗಳಿದ್ದು, ತನಿಖೆಯ ವೇಳೆ ಆ ಬಗ್ಗೆ ಎಲ್ಲಾ ವಿವರಗಳು ಬಹಿರಂಗಗೊಳ್ಳಿವೆ ಎಂದು ಹೇಳಲಾಗಿದೆ.

2023ರ ಅಕ್ಟೋಬರ್ ನಲ್ಲಿ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣ ಹತ್ಯೆ ದೊಡ್ಡ ದಂಧೆಯೊಂದನ್ನು ಪತ್ತೆ ಹಚ್ಚಿದ್ದ ಪೊಲೀಸರು, ಅದಕ್ಕೆ ಸಂಬಂದಿಸಿದ ಆರೋಪಿಗಳನ್ನು ಬಂಧಿಸಿದ್ದರು. ಮಂಡ್ಯ ತಾಲೂಕಿನ ಹುಳ್ಳನಹಳ್ಳಿ – ಕಾಡ್ಯ ಗ್ರಾಮದ ಕಬ್ಬಿನಗದ್ದೆಯ ಮಧ್ಯಭಾಗದಲ್ಲಿ ಅಲೆಮನೆಯ ಶೆಡ್ ಒಂದರಲ್ಲಿ ಈ ಕೃತ್ಯ ನಡೆಸಲಾಗುತ್ತಿತ್ತು.

ಆಲೆಮನೆಯನ್ನು ಬಾಡಿಗೆ ಪಡೆದಿದ್ದ ಹುಳ್ಳೇನಹಳ್ಳಿ ಗ್ರಾಮದ ನಯನ್ ಹಾಗೂ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮ ನವೀನ್ ಎಂಬ ಯುವಕರು ಭಾವ – ಭಾಮೈದರಾಗಿದ್ದು, ಅವರು ಈ ಆಲೆಮನೆಯನ್ನು ಬಾಡಿಗೆ ಪಡೆದಿದ್ದರು. ಅದರ ಪಕ್ಕದಲ್ಲೇ ಶೆಡ್ ಒಂದನ್ನು ನಿರ್ಮಿಸಿದ್ದರು. ಅದರಲ್ಲಿ ಸ್ಕ್ಯಾನಿಂಗ್ ಮೆಷೀನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನಿಟ್ಟುಕೊಂಡು ಅವರು ಅಕ್ರಮವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದರು. ಅಲ್ಲಿ ಭ್ರೂಣವು ಹೆಣ್ಣು ಎಂದು ಪತ್ತೆಯಾದರೆ ಅಂಥ ಗರ್ಭಿಣಿಯರನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಖಾಸಗಿ ಕ್ಲಿನಿಕ್ ಗಳಲ್ಲಿ ಗರ್ಭಪಾತ ಮಾಡಿಸುತ್ತಿದ್ದರು ಎಂದು ಹೇಳಲಾಗಿದೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago