ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ : ಬಿಎಸ್ ಯಡಿಯೂರಪ್ಪ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ : ಬಿಎಸ್ ಯಡಿಯೂರಪ್ಪ – Vishwanews24

ಹಾಸನ : ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತೇ ಇಲ್ಲ. ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಇದಕ್ಕೆ ರಾಜ್ಯ ಉಸ್ತುವಾರಿಗಳ ಬೆಂಬಲ ಕೂಡ ಇದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಸದ್ಯದಲ್ಲೇ ಭೇಟಿ ನೀಡಲಿದ್ದಾರೆ. ಅವರ ಬೆಂಬಲ ಸಲಹೆಯೊಂದಿಗೆ ಮುಂದಿನ 2 ವರ್ಷ ರಾಜ್ಯದಲ್ಲಿ ಸಿಎಂ ಆಗಿ ಮುಂದುವರೆಯಲಿದ್ದೇನೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಗೊಂದಲ ಬೇಡ ಎಂಬುದಾಗಿ ಸ್ಪಷ್ಟ ಪಡಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಹೈಕಮಾಂಡ್ ನಂಬಿಕೆ ಉಳಿಸಿಕೊಳ್ಳುವಂತೆ ರಾಜ್ಯದಲ್ಲಿ ಕೆಲಸ ಮಾಡುತ್ತೇನೆ. ಸದ್ಯದಲ್ಲೇ ರಾಜ್ಯಾಧ್ಯಂತ ಪ್ರವಾಸ ಕೈಗೊಂಡು, ಅಭಿವೃದ್ಧಿ ಕೆಲಸಕ್ಕೆ ಮತ್ತಷ್ಟು ಚುರುಕು ನೀಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಒಪ್ಪುವಂತೆ ಕೆಲಸ ಮಾಡಲಿದ್ದೇನೆ. ಸಿಎಂ ಬದಲಾವಣೆ ಮಾತೇ ಇಲ್ಲ. ಮುಂದಿನ 2 ವರ್ಷದ ಅವಧಿಗೆ ನಾನೇ ಸಿಎಂ ಎಂಬುದಾಗಿ ತಿಳಿಸಿದರು.