ಹಾಸನ : ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತೇ ಇಲ್ಲ. ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಇದಕ್ಕೆ ರಾಜ್ಯ ಉಸ್ತುವಾರಿಗಳ ಬೆಂಬಲ ಕೂಡ ಇದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಸದ್ಯದಲ್ಲೇ ಭೇಟಿ ನೀಡಲಿದ್ದಾರೆ. ಅವರ ಬೆಂಬಲ ಸಲಹೆಯೊಂದಿಗೆ ಮುಂದಿನ 2 ವರ್ಷ ರಾಜ್ಯದಲ್ಲಿ ಸಿಎಂ ಆಗಿ ಮುಂದುವರೆಯಲಿದ್ದೇನೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಗೊಂದಲ ಬೇಡ ಎಂಬುದಾಗಿ ಸ್ಪಷ್ಟ ಪಡಿಸಿದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಹೈಕಮಾಂಡ್ ನಂಬಿಕೆ ಉಳಿಸಿಕೊಳ್ಳುವಂತೆ ರಾಜ್ಯದಲ್ಲಿ ಕೆಲಸ ಮಾಡುತ್ತೇನೆ. ಸದ್ಯದಲ್ಲೇ ರಾಜ್ಯಾಧ್ಯಂತ ಪ್ರವಾಸ ಕೈಗೊಂಡು, ಅಭಿವೃದ್ಧಿ ಕೆಲಸಕ್ಕೆ ಮತ್ತಷ್ಟು ಚುರುಕು ನೀಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಒಪ್ಪುವಂತೆ ಕೆಲಸ ಮಾಡಲಿದ್ದೇನೆ. ಸಿಎಂ ಬದಲಾವಣೆ ಮಾತೇ ಇಲ್ಲ. ಮುಂದಿನ 2 ವರ್ಷದ ಅವಧಿಗೆ ನಾನೇ ಸಿಎಂ ಎಂಬುದಾಗಿ ತಿಳಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…