ಬೆಂಗಳೂರು : ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ ಎನ್ನಲಾಗಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು, 10 ಮುಸ್ಲಿಂ ಮಹಿಳಾ ಕಾಲೇಜು ನಿರ್ಮಾಣ ಖಂಡನೀಯ ಎಂದು ಹೇಳಿದರು.
ರಾಜ್ಯದಲ್ಲಿ 10 ಮುಸ್ಲಿಂ ಕಾಲೇಜು ನಿರ್ಮಾಣ ಮಾಡುವುತ್ತಿರುವುದು ಖಂಡನೀಯವಾಗಿದೆ. ಕಾಲೇಜು ನಿರ್ಮಾಣ ಮಾಡಿದ್ರೆ ರಾಜ್ಯದಲ್ಲಿ ತೀವ್ರ ಹೋರಾಟ ನಡೆಸುತ್ತೇವೆ, ಹಿಜಾಬ್ ಸಲುವಾಗಿ ಕಾಲೇಜು ನಿರ್ಮಿಸಿದ್ರೆ ಪ್ರತಿಭಟನೆ ನಡೆಸಲಿದ್ದೇವೆ. ನಾವು ಮುಸ್ಲಿಂ ಕಾಲೇಜು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ ಎನ್ನಲಾಗಿದೆ ಹಿಜಾಬ್ ವಿವಾದದ ಹಿನ್ನೆಲೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ , ಕಾಲೇಜು ನಿರ್ಮಾಣ ಉದ್ಘಾಟನೆಗೆ ಸಿಎಂ ಬೊಮ್ಮಾಯಿ ಕರೆಸಲಾಗುತ್ತದೆ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸಾ ಅದಿ ಮಾಹಿತಿ ನೀಡಿದ್ದಾರೆ.
ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.
ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…