ಬೆಂಗಳೂರು : ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ ಎನ್ನಲಾಗಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು, 10 ಮುಸ್ಲಿಂ ಮಹಿಳಾ ಕಾಲೇಜು ನಿರ್ಮಾಣ ಖಂಡನೀಯ ಎಂದು ಹೇಳಿದರು.
ರಾಜ್ಯದಲ್ಲಿ 10 ಮುಸ್ಲಿಂ ಕಾಲೇಜು ನಿರ್ಮಾಣ ಮಾಡುವುತ್ತಿರುವುದು ಖಂಡನೀಯವಾಗಿದೆ. ಕಾಲೇಜು ನಿರ್ಮಾಣ ಮಾಡಿದ್ರೆ ರಾಜ್ಯದಲ್ಲಿ ತೀವ್ರ ಹೋರಾಟ ನಡೆಸುತ್ತೇವೆ, ಹಿಜಾಬ್ ಸಲುವಾಗಿ ಕಾಲೇಜು ನಿರ್ಮಿಸಿದ್ರೆ ಪ್ರತಿಭಟನೆ ನಡೆಸಲಿದ್ದೇವೆ. ನಾವು ಮುಸ್ಲಿಂ ಕಾಲೇಜು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ ಎನ್ನಲಾಗಿದೆ ಹಿಜಾಬ್ ವಿವಾದದ ಹಿನ್ನೆಲೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ , ಕಾಲೇಜು ನಿರ್ಮಾಣ ಉದ್ಘಾಟನೆಗೆ ಸಿಎಂ ಬೊಮ್ಮಾಯಿ ಕರೆಸಲಾಗುತ್ತದೆ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸಾ ಅದಿ ಮಾಹಿತಿ ನೀಡಿದ್ದಾರೆ.
ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.
ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…