ಬೆಂಗಳೂರು: ನಮ್ಮ ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ಬೇಕು ಎಂದು ಪ್ರತಿಪಾದಿಸುವವರು ಅತ್ಯಾಚಾರಿಗಳ ಸಮರ್ಥಕರಿದ್ದಂತೆ. ಉನ್ನಾವೋ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಅತ್ಯಾಚಾರವೆಸಗಿದಲ್ಲದೆ ಜೈಲಿನಿಂದಲೇ ಸಂತ್ರಸ್ತೆಯ ತಂದೆ ಹಾಗೂ ವಕೀಲರನ್ನು ಕೊಲ್ಲಿಸುತ್ತಾನೆ. ಯೋಗಿ ಆಡಳಿತದ ಶ್ರೀರಕ್ಷೆಯಿಲ್ಲದೆ ಬಿಜೆಪಿ ಶಾಸಕನಿಗೆ ಈ ಕೃತ್ಯ ನಡೆಸಲು ಸಾಧ್ಯವೇ ಎಂದು ಸರಣಿ ಪ್ರಶ್ನೆಗಳೊಂದಿಗೆ ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ನಾಯಕರ ವಿರುದ್ಧ ಕಾಂಗ್ರೆಸ್ (Congress) ನಾಯಕ ದಿನೇಶ್ ಗುಂಡೂರಾವ್ (Dinesh Gundu Rao) ವಾಗ್ದಾಳಿ ನಡೆಸಿದ್ದಾರೆ.
ಹತ್ರಾಸ್ ಉನ್ನಾವೋ ಅತ್ಯಾಚಾರ ಘಟನೆ ಮಾಸುವ ಮುುುನ್ನವೇ ಉ.ಪ್ರದೇಶದಲ್ಲಿ ಮತ್ತೊಂದು ಜೋಡಿ ಅತ್ಯಾಚಾರ ಹಾಗೂ ಹತ್ಯೆಯ ಘಟನೆ ನಡೆದಿದೆ. ಯೋಗಿ ಮಾದರಿ, ಯೋಗಿ ಮಾದರಿ ಎಂದು ಬಾಯಿ ಬಡಿದುಕೊಳ್ಳುವ ರಾಜ್ಯ ಬಿಜೆಪಿ ನಾಯಕರು, ಯೋಗಿ ಆಡಳಿತದಲ್ಲಿ ಹೆಣ್ಣು ಮಕ್ಕಳಿಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಏನು ರಕ್ಷಣೆಯಿದೆ? ಅನಾಗರಿಕ ಯೋಗಿ ಮಾದರಿ ಆಡಳಿತ ನಮಗೆ ಬೇಕೆ?
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಯೋಗಿ ಆಡಳಿತದಲ್ಲಿ ಉ.ಪ್ರದೇಶ ( ಅನಾಗರಿಕರ ನಾಡಾಗಿದೆ. ಕೊಲೆ, ಅತ್ಯಾಚಾರ ಈ ರಾಜ್ಯದಲ್ಲಿ ಸರ್ವೇ ಸಾಮಾನ್ಯ. ಇಂತಹ ಗೂಂಡಾ ರಾಜ್ಯ ನಮ್ಮ ರಾಜ್ಯ ಬಿಜೆಪಿ ನಾಯಕರಿಗೆ ಮಾದರಿ ಅಂತಾ ಅನ್ನಿಸಿದಾದರೂ ಹೇಗೆ? ಯೋಗಿ ಮಾದರಿ ಎಂದು ಕನವರಿಸುವ ಬಿಜೆಪಿಯವರಿಗೆ ನಮ್ಮ ರಾಜ್ಯ ದಕ್ಷಿಣದ ಉ.ಪ್ರದೇಶವಾಗಬೇಕೆ? ಉ.ಪ್ರದೇಶದಂತೆ ಕರ್ನಾಟಕ ಅತ್ಯಾಚಾರಿಗಳ ಸ್ವರ್ಗವಾಗಬೇಕೆ?
ನಮ್ಮ ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ಬೇಕು ಎಂದು ಪ್ರತಿಪಾದಿಸುವವರು ಅತ್ಯಾಚಾರಿಗಳ ಸಮರ್ಥಕರಿದ್ದಂತೆ. ಉನ್ನಾವೋ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಅತ್ಯಾಚಾರವೆಸಗಿದಲ್ಲದೆ ಜೈಲಿನಿಂದಲೇ ಸಂತ್ರಸ್ತೆಯ ತಂದೆ ಹಾಗೂ ವಕೀಲರನ್ನು ಕೊಲ್ಲಿಸುತ್ತಾನೆ. ಯೋಗಿ ಆಡಳಿತದ ಶ್ರೀರಕ್ಷೆಯಿಲ್ಲದೆ ಬಿಜೆಪಿ ಶಾಸಕನಿಗೆ ಈ ಕೃತ್ಯ ನಡೆಸಲು ಸಾಧ್ಯವೇ?
ಹತ್ರಾಸ್ ಪ್ರಕರಣದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿಯ ಶವವನ್ನು ಪೋಷಕರಿಗೂ ತಿಳಿಯದಂತೆ ಕದ್ದುಮುಚ್ಚಿ ಉ.ಪ್ರದೇಶ ಪೊಲೀಸರು ಅಂತ್ಯಸಂಸ್ಕಾರ ನಡೆಸುತ್ತಾರೆ. ಯೋಗಿ ಆಡಳಿತದಲ್ಲಿ ಮಾತ್ರ ಇಂತಹ ಭೀಭತ್ಸ್ಯ ಕೃತ್ಯಗಳು ನಡೆಯಲು ಸಾಧ್ಯ. ಯೋಗಿ ಮಾದರಿ ಎಂದು ಬೊಬ್ಬಿರಿಯುವ ರಾಜ್ಯ ಬಿಜೆಪಿ ನಾಯಕರು ನಮ್ಮ ರಾಜ್ಯದಲ್ಲೂ ತರಲು ಹೊರಟಿರಯವುದು ಈ ಮಾದರಿಯನ್ನೇ ಎಂದು ಪ್ರಶ್ನಿಸಿ ಟೀಕಿಸಿದ್ದಾರೆ.
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…