Featured

ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್‌.ಡಿ. ಕುಮಾರಸ್ವಾಮಿ – Vishwanews24

ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್‌.ಡಿ. ಕುಮಾರಸ್ವಾಮಿ

ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ ಎದ್ದಿದ್ದು, ಜನತಾ ದಳದ ಪರವಾಗಿದೆ. ಜೆಡಿಎಸ್‌ನ ಈ ಸುನಾಮಿ ಅಲೆಯಲ್ಲಿ ಎಲ್ಲ ಪಕ್ಷಗಳೂ ಕೊಚ್ಚಿ ಹೋಗಲಿವೆ ಎಂದರು.

ನಗರದ ಸಿದ್ಧಗಂಗಾ ಮಠಕ್ಕೆ ಪಂಚರತ್ನ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ ಜನತೆ ಜೆಡಿಎಸ್‌ಗೆ ಬಹುಮತ ನೀಡುವ ತೀರ್ಮಾನ ಮಾಡಿದ್ದಾರೆ. ರಾಜಕೀಯ ಗಾಳಿ ಗಂಧ ಗೊತ್ತಿಲ್ಲದವರೂ ಸಹ ಕುಮಾರಣ್ಣ ಸಿಎಂ ಆಗಬೇಕು ಎಂಬ ಮಾತುಗಳನ್ನಾಡುತ್ತಿದ್ದಾರೆ ಎಂದರು.

 

ರಾಜ್ಯದ 36 ವಿಧಾನಸಭಾ ಕ್ಷೇತ್ರದಲ್ಲಿ ಮೊದಲನೇ ಹಂತದ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಜನವರಿ 3 ರಿಂದ 2ನೇ ಹಂತದ ರಥಯಾತ್ರೆ ಕಲಬುರಗಿ, ಬೀದರ್‌, ರಾಯಚೂರು, ವಿಜಯಪುರ ಸೇರಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಯಾತ್ರೆ ನಡೆಯಲಿದೆ ಎಂದರು.

ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಘೋಷಣೆ: ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯದಲ್ಲೇ ಘೋಷಣೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಥಯಾತ್ರೆ ಸಂಚರಿಸಿದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಯಲ್ಲಿ ಈಗಾಗಲೇ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಡಿ. 7ರಂದು ಕೆಜಿಎಫ್ನಲ್ಲಿ ರಥಯಾತ್ರೆ ನಡೆಯಲಿದ್ದು, ಆ ಸಂದರ್ಭದಲ್ಲಿ ಆ ಜಿಲ್ಲೆಯ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago