ಬೆಂಗಳೂರು: ಒಂದೊಮ್ಮೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬಂದರೆ ಅದಕ್ಕೆ ಮೈತ್ರಿ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನಿರ್ದೇಶನಕ್ಕೂ , ಯಾವ ನಿರ್ದೇಶನಕ್ಕೂ ಬಗ್ಗುತ್ತಿಲ್ಲ. ಒಂದೊಮ್ಮೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬಂದರೆ ಅದಕ್ಕೆ ಮೈತ್ರಿ ಸರ್ಕಾರವೇ ನೇರ ಕಾರಣ. ರಾಜ್ಯಪಾಲರು ಕೇಂದ್ರಕ್ಕೆ ವರದಿ ಕೊಟ್ಟಿದ್ದಾರೆ. ಮೈತ್ರಿ ಪಕ್ಷಗಳು ಸುಪ್ರೀಂಕೋರ್ಟ್’ಗೆ ಹೋದರೂ ಪ್ರಯೋಜನ ಇಲ್ಲ ಎಂದು ಹೇಳಿದರು.
ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.
ಜು.22ರ ಸೋಮವಾರ ಈ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟ ಇಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯ ಪ್ರವೇಶ ಮಾಡಬಹುದು. ರಾಷ್ಟ್ರಪತಿ ಆಡಳಿತ ಬಂದರೆ ಅದು ಈ ಸರ್ಕಾರದ ಮೊಂಡುತನದಿಂದಲೇ ಬರಬಹುದು ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…