Featured

ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್‌ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ : ಕುಮಾರಸ್ವಾಮಿ -Vishwanews24

ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್‌ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ : ಕುಮಾರಸ್ವಾಮಿ -Vishwanews24

ಬೆಂಗಳೂರು: “ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್‌ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

 

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, “2013-14ರ ಕಾಲ. ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು, ನಾನು. ಸರ್ಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಕೇಳಿದ್ದಾರೆ.

“ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.

ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‌ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್‌ ತೆರೆಮರೆಯ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್‌ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

13 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

23 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

23 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

23 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago