ಬೆಂಗಳೂರು: “ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ, ಕಾಂಗ್ರೆಸ್ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “2013-14ರ ಕಾಲ. ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.
“ಮಹದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು, ನಾನು. ಸರ್ಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಕೇಳಿದ್ದಾರೆ.
“ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.
ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದ್ದಾರೆ.
“ಕಾಂಗ್ರೆಸ್ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ” ಎಂದು ಕಿಡಿಕಾರಿದ್ದಾರೆ.
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…