Featured

ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಸೆಮಿ ಲಾಕ್‍ಡೌನ್ ಇಲ್ಲ : ಕೆ. ಸುಧಾಕರ್ -Vishwanews24

ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಸೆಮಿ ಲಾಕ್‍ಡೌನ್ ಇಲ್ಲ : ಕೆ. ಸುಧಾಕರ್ -Vishwanews24

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಸೆಮಿ ಲಾಕ್‍ಡೌನ್ ಇಲ್ಲ ಎಂದು ಸಚಿವ ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಗಳನ್ನು ಅವಲೋಕನ ಮಾಡಿ ಕೆಲವೊಂದು ನಿರ್ಣಯಗಳನ್ನು ನಿನ್ನೆ ಪ್ರಸ್ತಾಪ ಮಾಡಿದ್ದಾರೆ. ಮಹಾರಾಷ್ಟ್ರ ಹಾಗೂ ಕೇರಳ ಗಡಿ ಭಾಗಗಳಿಂದ ಬರುವ ಜನರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರನ್ನು ಕಡ್ಡಾಯವಾಗಿ ಒಳಗಡೆ ಬಿಡದಂತೆ ಸೂಚಿಸಲಾಗಿದ್ದು, ಸ್ಥಳದಲ್ಲೇ ಪರೀಕ್ಷೆ ಮಾಡುವಂತೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಅಧಿಕಾರಿಗಳು -Vishwanews24

ಸಾರ್ವಜನಿಕ ಸ್ಥಳಗಳಲ್ಲಿ ಬಹಳಷ್ಟು ಮಂದಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಹೀಗಾಗಿ ಮಾಸ್ಕ್ ಇಲ್ಲದೆ ಓಡಾಡುವವರಿಗೆ 250 ದಂಡ ವಿಧಿಸುವ ಕ್ರಮವನ್ನು ಎರಡು ದಿನಗಳೊಳಗೆ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಕೊರೊನಾ ವೈರಸ್ ಕುರಿತು ಅರಿವು ಮೂಡಿಸುವ ಕೆಲಸ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಮದುವೆ ಸಮಾರಂಭಗಳಲ್ಲಿ ನಿಗದಿಯಾದ ಮಿತಿಗಿಂತ ಜನ ಸೇರುವಂತಿಲ್ಲ. ಒಂದು ವೇಳೆ ಈ ರೂಲ್ಸ್ ಪಾಲೋ ಮಾಡದಿದ್ದರೆ ಮಾರ್ಷಲ್ ಗಳನ್ನು ಕಳುಹಿಸಲಾಗುವುದು ಅಲ್ಲದೆ ದಂಡ ಕೂಡ ವಿಧಿಸಲಾಗುತ್ತದೆ. ಸಮಾರಂಭದ ಆಯೋಜಕರು ಹಾಗೂ ಸ್ಥಳದ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಹೀಗಾಗಿ ಸೆಮಿ ಲಾಕ್ ಡೌನ್ ಅಥವಾ ಲಾಕ್ ಡೌನ್ ಮಾಡಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

4 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

4 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

4 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

5 hours ago