Featured

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ , ಊಹಾಪೋಹಗಳಿಗೆ ಜನ ಕಿವಿಗೊಡಬಾರದು : ಮುಖ್ಯಮಂತ್ರಿ ಬೊಮ್ಮಾಯಿ – Vishwanews24

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ , ಊಹಾಪೋಹಗಳಿಗೆ ಜನ ಕಿವಿಗೊಡಬಾರದು : ಮುಖ್ಯಮಂತ್ರಿ ಬೊಮ್ಮಾಯಿ – Vishwanews24

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪುನರುಚ್ಚರಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದರು.

ಕೋವಿಡ್ ಹೊಸ ತಳಿ ಒಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡು ತ್ತಿದ್ದು, ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ., ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್ ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ.

ಕ್ಲಸ್ಟರ್ ಗಳ ಬಗ್ಗೆ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್ ನಲ್ಲಿನ ಕಸ್ಟರ್ ಗಳಲ್ಲಿ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲೂ ಸಹ ಸೂಚನೆ ನೀಡಲಾಗಿದೆ ಎಂದರು.

ಇಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ನಡೆಸುವ ಪರಿಶೀಲನಾ ಸಭೆ ನಡೆಸುತ್ತಿದ್ದು, ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

12 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

12 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago