ಬೆಂಗಳೂರು: ‘ರಾಜ್ಯದಲ್ಲಿ ಶಾಂತಿ ಭಂಗವಾದ್ರೆ ಭಜರಂಗದಳ ಮಾತ್ರವಲ್ಲ ಆರೆಸ್ಸೆಸ್ ನ್ನು ನಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಇದನ್ನು ಒಪ್ಪಿಕೊಳ್ಳಲು ಅಸಾದ್ಯವಾದ್ರೆ ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡು ಮಾತನಾಡಿ, ‘ರಾಜ್ಯವನ್ನುಸರ್ವ ಜನಾಂಗದ ಶಾಂತಿಯ ತೋಟ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಶಾಂತಿ ಭಂಗವಾದ್ರೆ ಬಜರಂಗದಳ ಅಥವಾ ಆರೆಸ್ಸೆಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
‘ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ಅಲ್ಲದೇ ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ. ಕೇಸರಿಕರಣ ತಪ್ಪು ಯಾಕೆಂದರೆ ಕಾಂಗ್ರೆಸ್ ಪಕ್ಷ ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವ ಅನುಸರಿಸುತ್ತದೆ ಎಂದು ಹೇಳಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…