ಬೆಂಗಳೂರು: ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ. ಇದೊಂದು ಸಾಮಾನ್ಯವಾದ ಪ್ರಕ್ರಿಯೆ ಆಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ನೆಗಡಿ, ಶೀತ ಹೆಚ್ಚಳ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ. ಸಾರಿ ಮತ್ತು ILI ಕೇಸ್ ಅವು. ಈ ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದರು.
ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ. ನಾವು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು.
ಬೆಳಗಾವಿಯಲ್ಲಿ ಇಬ್ಬರು ಮಕ್ಕಳು ಚುಚ್ಚು ಮದ್ದಿನಿಂದ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಮಾತನಾಡಿ, ಸೆಪ್ಟಿಕ್ ಶಾಕ್ ಸಿಂಡ್ರೋಮ್ ನಿಂದ ಸತ್ತಿರೋ ಬಗ್ಗೆ ವರದಿ ಆಗಿದೆ. ಆದರೂ ಮತ್ತೊಂದು ಸುತ್ತಿನ ತನಿಖೆಗೆ ಸೂಚನೆ ನೀಡಿದ್ದೇನೆ. ಎರಡು ದಿನಗಳಲ್ಲಿ ವರದಿ ಕೊಡಲು ಸೂಚನೆ ನೀಡಲಾಗಿದೆ. ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಮಾಡಲು ಸೂಚನೆ ನೀಡಲಾಗಿದೆ. ಅಲ್ಲಿನ ANM ಮತ್ತು ಫಾರ್ಮಸಿಸ್ಟ್ ರನ್ನ ತಕ್ಷಣ ಅಮಾನತು ಮಾಡಲು ಸೂಚನೆ ನೀಡಿದ್ದೇನೆ. ಈಗ ಅಮಾನತು ಆಗುತ್ತಾರೆ. ನೋಡಲ್ ಆಫೀಸ್ ರನ್ನ ತನಿಖೆಗೆ ಕಳುಹಿಸುತ್ತಿದ್ದೇನೆ. ಪ್ರೊಟೋಕಾಲ್ ಪ್ರಕಾರ ಚಿಕಿತ್ಸೆ ನೀಡಿದ್ದಾರಾ ಅಂತ ತನಿಖೆ ಮಾಡಲಾಗುತ್ತೆ. ಎರಡು ದಿನಗಳಲ್ಲಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…