Featured

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ, ಜೆಡಿಎಸ್‌  ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ : ಕುಮಾರಸ್ವಾಮಿ  ಭರವಸೆ – Vishwanews24

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ, ಜೆಡಿಎಸ್‌  ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ : ಕುಮಾರಸ್ವಾಮಿ  ಭರವಸೆ

ಕೊಪ್ಪಳ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ. ಜೆಡಿಎಸ್‌  ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ ಆಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ  ಭರವಸೆ ವ್ಯಕ್ತಪಡಿಸಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದರುವ ಹೆಚ್‌ಡಿಕೆ, ರಾಜ್ಯದಲ್ಲಿ 123 ಸ್ಥಾನ ಗೆಲ್ಲಲು ಕೆಲಸ‌ ಮಾಡುತ್ತಿದ್ದೇವೆ. ವಾತಾವರಣ ಸಹ ಅದೇ ರೀತಿಯಾಗಿದೆ ಎಂದು ತಿಳಿಸಿದ್ದಾರೆ.

ಕರಡಿ ಸಂಗಣ್ಣ ಜೆಡಿಎಸ್‌ನಿಂದ ಸ್ಪರ್ಧಿಸುವ ಕುರಿತು ಮಾತನಾಡಿ, ಕರಡಿ ಸಂಗಣ್ಣ ನನ್ನ‌ ಜೊತೆಗೆ ಮಾತನಾಡಿಲ್ಲ. ಸಮಯ ಬಂದಾಗ, ದೇವರು ಯಾರ‍್ಯಾರಿಗೆ ಏನೇನು ಆಟ ಆಡಿಸುತ್ತಾನೋ ನೋಡೋಣ ಎಂದು ಕರಡಿ ಸಂಗಣ್ಣ ಜೆಡಿಎಸ್‌ಗೆ ಬರಬಹುದೆಂದು ಪರೋಕ್ಷವಾಗಿ ನುಡಿದಿದ್ದಾರೆ.

ಗಂಗಾವತಿಯಲ್ಲಿ ಜನಾರ್ದನರೆಡ್ಡಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರ ತೀರ್ಮಾನ. ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಅವರ ಬಗ್ಗೆ ನಾವು ಸಣ್ಣದಾಗಿ, ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟ ವಿಚಾರವಾಗಿ ಮಾತನಾಡಿ, ಅಮುಲ್‌ಗೆ ನಂದಿನಿ ಸರಿಸಾಟಿಯಾಗಿ ಬೆಳೆಯುತ್ತಿದೆ. ನಂದಿನಿಯನ್ನು ಮುಗಿಸುವ ಸಂಚು ನಡೆಯುತ್ತಿದೆ. ಈ ಸರ್ಕಾರ ಹುಡುಗಾಟಿಕೆ ಆಡ್ತಾ ಇದೆ. ಇವರಲ್ಲಿ ಹಲವರು ಇದಕ್ಕೆ ಕುಮ್ಮಕ್ಕು ಕೋಡ್ತಾ ಇದ್ದಾರೆ. ಅವರಿಗೆ ಎಚ್ಚರಿಕೆ ಕೊಡ್ತೀನಿ. ಇನ್ನು‌ 15-20 ದಿನದಲ್ಲಿ ಈ ಸರ್ಕಾರ ಉಳಿಯುವುದಿಲ್ಲ. ಆಮೇಲೆ ನಮ್ಮ ಸಂಪತ್ತು, ಆಸ್ತಿ ಉಳಿಸೋದು ಹೇಗೆ ಅಂತ ನೋಡುತ್ತೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

5 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

6 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

6 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago