Featured

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧ : ಆರೋಗ್ಯ ಇಲಾಖೆ ಆದೇಶ – Vishwanews24

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧ : ಆರೋಗ್ಯ ಇಲಾಖೆ ಆದೇಶ

ಹುಕ್ಕಾ ನಿಷೇಧಿಸುವಲ್ಲಿ ಯಶಸ್ಸಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು ( vishwanews24): ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಕ್ಕೆಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯದ ಕುರಿತು ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹುಕ್ಕಾ ನಿಷೇಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಈ ಮೂಲಕ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ.

ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನ ನಿಷೇಧಿಸುತ್ತಿರುವುದಾಗಿ ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ವಿಶ್ವ ಆರೋಗ್ಯ, ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೋ ಸರ್ವೇ ಪ್ರಕಾರ 2016-17ಕರಲ್ಲಿ ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ 8.8% ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ. ಇದು ರಾಜ್ಯದಲ್ಲಿ ತಂಬಾಕು ಸೇವನೆಯ ವ್ಯಾಪಕ ಅಪಾಯಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago