Featured

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಪಶುಸಂಗೋಪನೆ ಇಲಾಖೆಯಿಂದ  ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಕೋಳಿ ಸೇವನೆಗೆ ಪಶುಸಂಗೋಪನೆ ಇಲಾಖೆಯಿಂದ  ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಶುಸಂಗೋಪನೆ ಇಲಾಖೆಯೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ರಾಜ್ಯ ಸರ್ಕಾರ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೋಳಿ ಸೇವನೆಗೆ ಮಾರ್ಗಸೂಚಿ:
70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ ಎಂದು ಗೈಡ್‌ಲೈನ್ಸ್ ಹೇಳಿದೆ.

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago