ಹಾಸನ: ಕೋವಿಡ್ ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶುಕ್ರವಾರ ಬೂವನಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್ಪೋರ್ಟ್ ಕೆಲಸ ಆರಂಭಿಸಲಾಗುವುದು. ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ. ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೋವಿಡ್ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ ಶಾಸಕ ಎಚ್.ಡಿ ರೇವಣ್ಣ ಹೇಳಿಕೆಗೆ ಕಿಡಿಕಾರಿದ ಮುಖ್ಯಮಂತ್ರಿ, ಜವಾಬ್ದಾರಿಯುತ ಶಾಸಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅವರು ಸಹ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ನಿರ್ವಹಿಸದೆ ಬೇರೆಯವರ ಬಗ್ಗೆ ಬೆಟ್ಟು ತೋರಿಸಬಾರದು ಎಂದರು.
ಮೂರನೆ ಅಲೆಯಲ್ಲಿ ಯಾವುದೇ ಅನಾಹುತ ಆಗದಂತೆ ಸಿದ್ಧತೆ ಮಾಡುತ್ತಿದ್ದೇವೆ. ಕೋವಿಡ್ ಬಗ್ಗೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬ ವಿರೋಧ ಪಕ್ಷದವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸುಳ್ಳು ಲೆಕ್ಕ ಕೊಡುತ್ತೇವೆ ಅಂದಿದ್ದು ಯಾರು..? ಅದರಿಂದ ನಮಗೇನು ಲಾಭ ಎಂದು ಪ್ರಶ್ನಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…