Featured

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ವೈಷಮ್ಯ ವಿಚಾರದಿಂದಾಗ ಕರ್ನಾಟಕದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಿದೆ : ಯು.ಟಿ ಖಾದರ್ ವಾಗ್ದಾಳಿ – VIshwanews24

ರಾಜ್ಯ ಸರಕಾರ ದಿವಾಳಿಯಾಗಿದೆ..

ಸಿಎಂ ಮೌನವಾಗಿ ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ..

ಮಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ವೈಷಮ್ಯ ವಿಚಾರದಿಂದಾಗ ಕರ್ನಾಟಕದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಿದೆ. ಧಾರವಾಡ ಘಟನೆಯನ್ನು ಸರ್ವ ಧರ್ಮೀಯರು ಖಂಡಿಸಿದ್ದಾರೆ. ಇಂತಹ ವಿಚಾರ ರಾಜ್ಯ ಸರಕಾರಕ್ಕೆ ತಿರುಗುಬಾಣವಾಗಲಿದೆ. ರಾಜ್ಯ ಸರಕಾರ ದಿವಾಳಿಯಾಗಿದೆ, ಹಾಗಾಗಿ ಇಂತಹದ್ದಕ್ಕೆ ಪ್ರೇರಣೆ ನೀಡುತ್ತಿದೆ. ಸಿಎಂ ಮೌನವಾಗಿ ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ ಖಾದರ್ ವಾಗ್ದಾಳಿ ನದೆಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷದ ನಾಯಕರು, ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಈಗಲಾದರೂ ಮಾತಾಡಬೇಕು. ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಕೋಮುವಾದಿಗಳನ್ನು ಮಟ್ಟ ಹಾಕಬೇಕು. ಇಲ್ಲದಿದ್ದರೆ ಅದನ್ನು ಸರಕಾರ ಎನ್ನಲಾಗದು ಎಂದರು.

ಸರಕಾರ, ಮಾಧ್ಯಮಗಳಿಗೆ ದೊಡ್ಡ ಜವಾಬ್ದಾರಿ ಇದೆ. ಮಾಧ್ಯಮಗಳು ಎರಡು ಬಾರಿ ನಿರ್ಲಕ್ಷ್ಯ ಮಾಡಿದ್ರೆ ಅವರು ಸುಮ್ಮನಾಗುತ್ತಾರೆ. ಫ್ಲೆಕ್ಸ್ ಹಾಕಿದ ಕೂಡಲೇ ಪ್ರಚಾರ ಕೊಟ್ಟರಷ್ಟೇ ಸುದ್ದಿಯಾಗುತ್ತದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಬಗ್ಗೆ ಒಂದು ವಾರ ಚರ್ಚೆ ಮಾ.ಡಿ ಮಾಧ್ಯಮಗಳು ಯಾಕಾಗಿ ಅದನ್ನ ಮಾಡ್ತಿಲ್ಲ ಅನ್ನೋದು ನಂಗೆ ಅಚ್ಚರಿ ಆಗ್ತಿದೆ ಎಂದಿದ್ದಾರೆ.

ಇನ್ನು ಕರಾವಳಿಯ ಮರಳುಗಾರಿಕೆ ಸಮಸ್ಯೆ ಬಗೆಹರಿದಿಲ್ಲ.ಮನೆ ಕಟ್ಟಲು ಜನ ಪರದಾಡುವಂತಾಗಿದೆ. ಕಾಂಗ್ರೆಸ್ ಸರಕಾರವಿದ್ದಾಗ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಮರಳು ಖರೀದಿಸಬಹುದಿತ್ತು. ಇವತ್ತು ಮೂರು ಪಟ್ಟು ದರ ಕೊಡುವಂತಾಗಿದೆ. ಕಳೆದ ಆಗಸ್ಟ್ ನಲ್ಲಿ ಮರಳು ಬಂದ್ ಆಗಿದ್ದು ಇನ್ನೂ ಆರಂಭಿಸಿಲ್ಲ. ಹೀಗಾಗಿ ಅಕ್ರಮ ಮರಳುಗಾರಿಕೆ ಮುಂದುವರಿದಿದೆ. ತಕ್ಷಣವೇ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

4 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

5 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

6 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

6 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago