ಬೆಂಗಳೂರು: ದೇಶದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆ ಲಸಿಕೆ ವಿತರಣೆಗೆ ಸಿದ್ದತೆ ನಡೆಸಿದೆ. ಆದರೆ ಮಕ್ಕಳಿಗೆ ಲಸಿಕೆ ನೀಡಲು ಯಾವ ಮಾರ್ಗಸೂಚಿ ಅನುಸರಿಸಬೇಕು ಎಂದು ಕೇಂದ್ರ ತಿಳಿಸಿರಲಿಲ್ಲ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮದೊಂದಿಗೆ ಮಾತನಾಡಿದಂತ ಸಿಎಂ ಬೊಮ್ಮಾಯಿ, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳಿಗೆ ಸಿದ್ಧತೆ ನಡೆಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದ್ದಾರೆ.
ಮುಂದಿನ ಎರಡು ಮೂರು ತಿಂಗಳಲ್ಲಿ ಎಸೆಸೆಲ್ಸಿ ಮತ್ತುಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಬಹಳ ಮುಖ್ಯವಾಗಿದೆ. ರಾಜ್ಯದಲ್ಲಿ 15 ರಿಂದ 18 ವರ್ಷದ ಒಲಗಿನ ೪೩ ಲಕ್ಷ ಮಂದಿ ಇದ್ದು ಇವರೆಲ್ಲರೂ ಬೂಸ್ಟರ್ ಡೋಸ್ ಪಡೆಯಲು ಅರ್ಹರಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…